ಕ್ರೀಡೆ

vijay hazare: ಫೈನಲ್‌ ಲಗ್ಗೆಯಿಟ್ಟ ರಾಜಸ್ಥಾನ; ಕರ್ನಾಟಕಕ್ಕೆ ನಿರಾಸೆ

ರಾಜ್‌ಕೋಟ್‌ : ನಾಯಕ ದೀಪಕ್‌ ಹೂಡಾ ಅವರ ಅಮೋಘ ಶತಕದ ಬಲದಿಂದ ರಾಜಸ್ಥಾನ ತಂಡ ಅದ್ದೂರಿ ಜಯ ದಾಖಲಿಸಿದೆ.

ಇಲ್ಲನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ವಿಜಯ್​ ಹಜಾರೆ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ವಿರುದ್ಧ 6 ವಿಕೆಟ್‌ಗಳ ಜಯಭೇರಿ ಬಾರಿಸಿದ ರಾಜಸ್ಥಾನ್ ತಂಡ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಟಾಸ್ ಗೆದ್ದು ಬ್ಯಾಟಿಂಗ್‌ ಮಾಡಿದ ಕರ್ನಾಟಕ ತಂಡ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಆರ್‌. ಸಮರ್ಥ್ (8) ಹಾಗೂ ಮಯಾಂಕ್ ಅಗರ್ವಾಲ್ (13) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕಿನ್ ಜೋಸ್ 21 ರನ್​ಗಳಿಸಲಷ್ಟೇ ಶಕ್ತರಾದರು. ಕೃಷ್ಣನ್ ಶ್ರೀಜಿತ್ 45 ಎಸೆತಗಳಲ್ಲಿ 37 ರನ್ ಬಾರಿಸಿ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಿ ನಿಂತರು. ಇನ್ನು ಮನೀಶ್ ಪಾಂಡೆ 28 ರನ್​ಗಳ ಕೊಡುಗೆ ನೀಡಿದರು.

ತಂಡಕ್ಕೆ ಆಸರೆಯಾಗಿ ಬಿರುಸಿನ ಬ್ಯಾಟಿಂಗ್​ ಮಾಡಿದ ಅಭಿನವ್ ಮನೋಹರ್ 80 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 91 ರನ್ ಬಾರಿಸಿದರು. ಇನ್ನು ಮನೋಜ್ ಭಾಂಡಗೆ 39 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 63 ರನ್ ಚಚ್ಚಿದರು.

ಕರ್ನಾಟಕ ತಂಡ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 282 ರನ್ ಕಲೆಹಾಕಿತು. ರಾಜಸ್ಥಾನ್‌ ಪರ ಅನಿಕೇತ್‌ ಚೌಧರಿ ಮತ್ತು ಅಜಯ್‌ ಸಿಂಗ್‌ ತಲಾ 2 ವಿಕೆಟ್‌ ಪಡೆದರು.

ಈ ಬೃಹತ್‌ ಮೊತ್ತ ಚೇಸ್‌ ಮಾಡಲು ಹೊರಟ ರಾಜಸ್ಥಾನ್‌ಗೆ ಆರಂಭಿಕ ಆಘಾತ ಎದುರಾಯಿತು. ಆರಂಭೀಕ ಆಟಗಾರರಾದ ಅಭಿಜಿತ್‌ ತೋಮರ್‌ ಮತ್ತು ರಾಮ್‌ ಮೊಹನ್‌ ಚೌಹಾಣ್‌ ಖಾತೆ ತೆರೆಯದೆ ಹಿಂದುರಿಗಿದರು. ಲೋಮ್‌ರೋರ್‌ (14) ರನ್‌ಗಳಿಸಿ ನಿರ್ಗಮಿಸಿದರು.

ನಂತರ ಜೊತೆಯಾದ ನಾಯಕ ದೀಪಕ್‌ ಹೂಡಾ ಮತ್ತು ಕರಣ್‌ ಲಂಬಾ ತಂಡದ ದಿಕ್ಕನ್ನೇ ಬದಲಿಸಿದರು. ಕರ್ನಾಟಕದ ದಿಟ್ಟ ಬೌಲಿಂಗ್‌ ಎದುರಿಸಿದ ನಾಯಕ ಹೂಡಾ ತಾವೆದುರಿಸಿದ 128 ಎಸೆತಗಳಲ್ಲಿ 19 ಬೌಂಡರಿ ಮತ್ತು 5 ಸಿಕ್ಸರ್‌ ಸಹಿತ ಬರೋಬ್ಬರಿ 180ರನ್‌ ಕಲೆಹಾಕಿದರು. ಇತ್ತ ನಾಯಕನಿಗೆ ಬೆಂಬಲ ನೀಡಿದ ಕರಣ್‌ ಲಂಬಾ 73ರನ್‌ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಅಂತಿಮವಾಗಿ ರಾಜಸ್ಥಾನ 43.4 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 283 ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ಪಂದ್ಯ ಶ್ರೇಷ್ಠ : ದೀಪಕ್‌ ಹೂಡಾ.

* ಡಿಸೆಂಬರ್‌ 16 ರಂದು ಹರ್ಯಾಣ ವಿರುದ್ದ ರಾಜಸ್ಥಾನ ಫೈನಲ್‌ ಪಂದ್ಯ ಆಡಲಿದೆ.
ಈ ಪಂದ್ಯವು ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಮದ್ಯಾಹ್ನ 1.30 ಕ್ಕೆ ನಡೆಯಲಿದೆ.

andolanait

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

49 mins ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

1 hour ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

3 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

3 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

11 hours ago