ಕ್ರೀಡೆ

Vijay Hazare Trophy 2023: ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಕರ್ನಾಟಕ

ಪ್ರಸ್ತುತ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಮಿಜೊರಾಂ ತಂಡವನ್ನು ಸೋಲಿಸುವ ಮೂಲಕ ಕ್ವಾರ್ಟರ್‌ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಲೀಗ್‌ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದ ಕರ್ನಾಟಕ 6 ಪಂದ್ಯಗಳಲ್ಲಿ ಗೆದ್ದಿದ್ದು, ಒಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ 24 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಲೀಗ್ ಹಂತದಲ್ಲಿ ಕಣಕ್ಕಿಳಿದ ಎಲ್ಲಾ 7 ಪಂದ್ಯಗಳನ್ನು ಗೆದ್ದ ಹರಿಯಾಣ ಅಂಕಪಟ್ಟಿಯಲ್ಲಿ 28 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನದಲ್ಲಿದೆ.

ನಿನ್ನೆ ( ಡಿಸೆಂಬರ್‌ 5 ) ಅಹ್ಮದಾಬಾದ್‌ನ ಗುಜರಾತ್‌ ಕಾಲೇಜು ಗ್ರೌಂಡ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಿಜೊರಾಂ 37.2 ಓವರ್‌ಗಳಲ್ಲಿ 124 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಕರ್ನಾಟಕ ತಂಡಕ್ಕೆ ಗೆಲ್ಲಲು 125 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಕರ್ನಾಟಕ 17.1 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 126 ರನ್‌ ಗಳಿಸಿ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.

ಕರ್ನಾಟಕದ ಪರ ಬೌಲಿಂಗ್‌ನಲ್ಲಿ ವಾಸುಕಿ ಕೌಶಿಕ್‌ 4 ವಿಕೆಟ್‌ ಪಡೆದು ಮಿಂಚಿದರು, ಕೃಷ್ಣಪ್ಪ ಗೌತಮ್‌ 3 ವಿಕೆಟ್‌, ಮನೋಜ್‌ ಭಂಡಗೆ 2 ವಿಕೆಟ್‌ ಹಾಗೂ ಮುರಳೀಧರ ವೆಂಕಟೇಶ್‌ ಒಂದು ವಿಕೆಟ್‌ ಪಡೆದರು. ಬ್ಯಾಟಿಂಗ್‌ನಲ್ಲಿ ನಾಯಕ ಮಯಾಂಕ್‌ ಅಗರ್ವಾಲ್‌ ಅಜೇಯ 48 ಹಾಗೂ ಮನೀಶ್‌ ಪಾಂಡೆ ಅಜೇಯ 38 ರನ್‌ ಕಲೆಹಾಕಿದರು.

ಕ್ವಾರ್ಟರ್‌ ಫೈನಲ್‌ ಸೆಣಸಾಟ ಹೀಗಿರಲಿದೆ:
ಕರ್ನಾಟಕ ತಂಡ ಕ್ವಾರ್ಟರ್‌ ಫೈನಲ್‌ನಲ್ಲಿ ವಿದರ್ಭ ತಂಡದ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯ ರಾಜ್‌ಕೋಟ್‌ನ ಸನೋಸರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್‌ಗೆ ಪ್ರವೇಶಿಸಲಿದೆ. ವಿದರ್ಧ ತಂಡ ಲೀಗ್‌ನಲ್ಲಿ ಕಣಕ್ಕಿಳಿದಿದ್ದ ತನ್ನ ಒಟ್ಟು 7 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿತ್ತು.

andolana

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

9 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

9 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

10 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

10 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

12 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

12 hours ago