ಕ್ರೀಡೆ

Vijay Hazare Trophy 2023: ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಕರ್ನಾಟಕ

ಪ್ರಸ್ತುತ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಮಿಜೊರಾಂ ತಂಡವನ್ನು ಸೋಲಿಸುವ ಮೂಲಕ ಕ್ವಾರ್ಟರ್‌ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಲೀಗ್‌ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದ ಕರ್ನಾಟಕ 6 ಪಂದ್ಯಗಳಲ್ಲಿ ಗೆದ್ದಿದ್ದು, ಒಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ 24 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಲೀಗ್ ಹಂತದಲ್ಲಿ ಕಣಕ್ಕಿಳಿದ ಎಲ್ಲಾ 7 ಪಂದ್ಯಗಳನ್ನು ಗೆದ್ದ ಹರಿಯಾಣ ಅಂಕಪಟ್ಟಿಯಲ್ಲಿ 28 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನದಲ್ಲಿದೆ.

ನಿನ್ನೆ ( ಡಿಸೆಂಬರ್‌ 5 ) ಅಹ್ಮದಾಬಾದ್‌ನ ಗುಜರಾತ್‌ ಕಾಲೇಜು ಗ್ರೌಂಡ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಿಜೊರಾಂ 37.2 ಓವರ್‌ಗಳಲ್ಲಿ 124 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಕರ್ನಾಟಕ ತಂಡಕ್ಕೆ ಗೆಲ್ಲಲು 125 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಕರ್ನಾಟಕ 17.1 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 126 ರನ್‌ ಗಳಿಸಿ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.

ಕರ್ನಾಟಕದ ಪರ ಬೌಲಿಂಗ್‌ನಲ್ಲಿ ವಾಸುಕಿ ಕೌಶಿಕ್‌ 4 ವಿಕೆಟ್‌ ಪಡೆದು ಮಿಂಚಿದರು, ಕೃಷ್ಣಪ್ಪ ಗೌತಮ್‌ 3 ವಿಕೆಟ್‌, ಮನೋಜ್‌ ಭಂಡಗೆ 2 ವಿಕೆಟ್‌ ಹಾಗೂ ಮುರಳೀಧರ ವೆಂಕಟೇಶ್‌ ಒಂದು ವಿಕೆಟ್‌ ಪಡೆದರು. ಬ್ಯಾಟಿಂಗ್‌ನಲ್ಲಿ ನಾಯಕ ಮಯಾಂಕ್‌ ಅಗರ್ವಾಲ್‌ ಅಜೇಯ 48 ಹಾಗೂ ಮನೀಶ್‌ ಪಾಂಡೆ ಅಜೇಯ 38 ರನ್‌ ಕಲೆಹಾಕಿದರು.

ಕ್ವಾರ್ಟರ್‌ ಫೈನಲ್‌ ಸೆಣಸಾಟ ಹೀಗಿರಲಿದೆ:
ಕರ್ನಾಟಕ ತಂಡ ಕ್ವಾರ್ಟರ್‌ ಫೈನಲ್‌ನಲ್ಲಿ ವಿದರ್ಭ ತಂಡದ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯ ರಾಜ್‌ಕೋಟ್‌ನ ಸನೋಸರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್‌ಗೆ ಪ್ರವೇಶಿಸಲಿದೆ. ವಿದರ್ಧ ತಂಡ ಲೀಗ್‌ನಲ್ಲಿ ಕಣಕ್ಕಿಳಿದಿದ್ದ ತನ್ನ ಒಟ್ಟು 7 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿತ್ತು.

andolana

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

3 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

4 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

5 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

5 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

5 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

5 hours ago