ಕ್ರೀಡೆ

Vijay Hazare Trophy 2023: ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಕರ್ನಾಟಕ

ಪ್ರಸ್ತುತ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಮಿಜೊರಾಂ ತಂಡವನ್ನು ಸೋಲಿಸುವ ಮೂಲಕ ಕ್ವಾರ್ಟರ್‌ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಲೀಗ್‌ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದ ಕರ್ನಾಟಕ 6 ಪಂದ್ಯಗಳಲ್ಲಿ ಗೆದ್ದಿದ್ದು, ಒಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ 24 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಲೀಗ್ ಹಂತದಲ್ಲಿ ಕಣಕ್ಕಿಳಿದ ಎಲ್ಲಾ 7 ಪಂದ್ಯಗಳನ್ನು ಗೆದ್ದ ಹರಿಯಾಣ ಅಂಕಪಟ್ಟಿಯಲ್ಲಿ 28 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನದಲ್ಲಿದೆ.

ನಿನ್ನೆ ( ಡಿಸೆಂಬರ್‌ 5 ) ಅಹ್ಮದಾಬಾದ್‌ನ ಗುಜರಾತ್‌ ಕಾಲೇಜು ಗ್ರೌಂಡ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಿಜೊರಾಂ 37.2 ಓವರ್‌ಗಳಲ್ಲಿ 124 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಕರ್ನಾಟಕ ತಂಡಕ್ಕೆ ಗೆಲ್ಲಲು 125 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಕರ್ನಾಟಕ 17.1 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 126 ರನ್‌ ಗಳಿಸಿ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.

ಕರ್ನಾಟಕದ ಪರ ಬೌಲಿಂಗ್‌ನಲ್ಲಿ ವಾಸುಕಿ ಕೌಶಿಕ್‌ 4 ವಿಕೆಟ್‌ ಪಡೆದು ಮಿಂಚಿದರು, ಕೃಷ್ಣಪ್ಪ ಗೌತಮ್‌ 3 ವಿಕೆಟ್‌, ಮನೋಜ್‌ ಭಂಡಗೆ 2 ವಿಕೆಟ್‌ ಹಾಗೂ ಮುರಳೀಧರ ವೆಂಕಟೇಶ್‌ ಒಂದು ವಿಕೆಟ್‌ ಪಡೆದರು. ಬ್ಯಾಟಿಂಗ್‌ನಲ್ಲಿ ನಾಯಕ ಮಯಾಂಕ್‌ ಅಗರ್ವಾಲ್‌ ಅಜೇಯ 48 ಹಾಗೂ ಮನೀಶ್‌ ಪಾಂಡೆ ಅಜೇಯ 38 ರನ್‌ ಕಲೆಹಾಕಿದರು.

ಕ್ವಾರ್ಟರ್‌ ಫೈನಲ್‌ ಸೆಣಸಾಟ ಹೀಗಿರಲಿದೆ:
ಕರ್ನಾಟಕ ತಂಡ ಕ್ವಾರ್ಟರ್‌ ಫೈನಲ್‌ನಲ್ಲಿ ವಿದರ್ಭ ತಂಡದ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯ ರಾಜ್‌ಕೋಟ್‌ನ ಸನೋಸರ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್‌ಗೆ ಪ್ರವೇಶಿಸಲಿದೆ. ವಿದರ್ಧ ತಂಡ ಲೀಗ್‌ನಲ್ಲಿ ಕಣಕ್ಕಿಳಿದಿದ್ದ ತನ್ನ ಒಟ್ಟು 7 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿತ್ತು.

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

7 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

8 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

8 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

8 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

9 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

9 hours ago