ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಮಿಜೊರಾಂ ತಂಡವನ್ನು ಸೋಲಿಸುವ ಮೂಲಕ ಕ್ವಾರ್ಟರ್ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಲೀಗ್ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಕಣಕ್ಕಿಳಿದ ಕರ್ನಾಟಕ 6 ಪಂದ್ಯಗಳಲ್ಲಿ ಗೆದ್ದಿದ್ದು, ಒಂದು ಪಂದ್ಯದಲ್ಲಿ ಸೋತು ಅಂಕಪಟ್ಟಿಯಲ್ಲಿ 24 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಇನ್ನು ಲೀಗ್ ಹಂತದಲ್ಲಿ ಕಣಕ್ಕಿಳಿದ ಎಲ್ಲಾ 7 ಪಂದ್ಯಗಳನ್ನು ಗೆದ್ದ ಹರಿಯಾಣ ಅಂಕಪಟ್ಟಿಯಲ್ಲಿ 28 ಅಂಕಗಳನ್ನು ಪಡೆದುಕೊಂಡು ಅಗ್ರಸ್ಥಾನದಲ್ಲಿದೆ.
ನಿನ್ನೆ ( ಡಿಸೆಂಬರ್ 5 ) ಅಹ್ಮದಾಬಾದ್ನ ಗುಜರಾತ್ ಕಾಲೇಜು ಗ್ರೌಂಡ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮಿಜೊರಾಂ 37.2 ಓವರ್ಗಳಲ್ಲಿ 124 ರನ್ ಕಲೆಹಾಕಿ ಆಲ್ಔಟ್ ಆಗಿ ಕರ್ನಾಟಕ ತಂಡಕ್ಕೆ ಗೆಲ್ಲಲು 125 ರನ್ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಕರ್ನಾಟಕ 17.1 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿ 6 ವಿಕೆಟ್ಗಳ ಗೆಲುವನ್ನು ದಾಖಲಿಸಿತು.
ಕರ್ನಾಟಕದ ಪರ ಬೌಲಿಂಗ್ನಲ್ಲಿ ವಾಸುಕಿ ಕೌಶಿಕ್ 4 ವಿಕೆಟ್ ಪಡೆದು ಮಿಂಚಿದರು, ಕೃಷ್ಣಪ್ಪ ಗೌತಮ್ 3 ವಿಕೆಟ್, ಮನೋಜ್ ಭಂಡಗೆ 2 ವಿಕೆಟ್ ಹಾಗೂ ಮುರಳೀಧರ ವೆಂಕಟೇಶ್ ಒಂದು ವಿಕೆಟ್ ಪಡೆದರು. ಬ್ಯಾಟಿಂಗ್ನಲ್ಲಿ ನಾಯಕ ಮಯಾಂಕ್ ಅಗರ್ವಾಲ್ ಅಜೇಯ 48 ಹಾಗೂ ಮನೀಶ್ ಪಾಂಡೆ ಅಜೇಯ 38 ರನ್ ಕಲೆಹಾಕಿದರು.
ಕ್ವಾರ್ಟರ್ ಫೈನಲ್ ಸೆಣಸಾಟ ಹೀಗಿರಲಿದೆ:
ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ನಲ್ಲಿ ವಿದರ್ಭ ತಂಡದ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯ ರಾಜ್ಕೋಟ್ನ ಸನೋಸರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್ಗೆ ಪ್ರವೇಶಿಸಲಿದೆ. ವಿದರ್ಧ ತಂಡ ಲೀಗ್ನಲ್ಲಿ ಕಣಕ್ಕಿಳಿದಿದ್ದ ತನ್ನ ಒಟ್ಟು 7 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿತ್ತು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…