ಕ್ರೀಡೆ

Vijay Hazare Trophy 2023: ರೌಂಡ್‌ 3 ಪಂದ್ಯಗಳ ಮುಕ್ತಾಯದ ಬಳಿಕ ಅಗ್ರಸ್ಥಾನದಲ್ಲಿವೆ ಈ 4 ತಂಡಗಳು

ಸದ್ಯ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯ ರೌಂಡ್‌ 3 ಪಂದ್ಯಗಳು ನಿನ್ನೆ ( ನವೆಂಬರ್‌ 27 ) ಮುಕ್ತಾಯಗೊಂಡಿವೆ. ಇನ್ನು ಕರ್ನಾಟಕ ತಂಡ ರೌಂಡ್‌ 3 ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಸತತ ಮೂರನೇ ಜಯ ಸಾಧಿಸಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ.

ಮೊದಲಿಗೆ ಜಮ್ಮು ಕಾಶ್ಮೀರದ ವಿರುದ್ಧ ಕಣಕ್ಕಿಳಿದು 222 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದ ಕರ್ನಾಟಕ ಎರಡನೇ ಪಂದ್ಯದಲ್ಲಿ ಉತ್ತರಾಖಂಡ ತಂಡದ ವಿರುದ್ಧ 52 ಪಂದ್ಯಗಳ ಜಯ ದಾಖಲಿಸಿತ್ತು. ಹೀಗೆ ಹ್ಯಾಟ್ರಿಕ್‌ ಜಯ ಸಾಧಿಸಿರುವ ಕರ್ನಾಟಕ ಕರ್ನಾಟಕ ಗ್ರೂಪ್‌ ಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಇನ್ನು ಮುಂಬೈ, ವಿದರ್ಭ, ರಾಜಸ್ಥಾನ್‌ ಹಾಗೂ ಮಧ್ಯ ಪ್ರದೇಶ ತಂಡಗಳೂ ಸಹ ತಮ್ಮ ತಮ್ಮ ಅಂಕಪಟ್ಟಿಗಳಲ್ಲಿ ಹ್ಯಾಟ್ರಿಕ್‌ ಜಯದೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿವೆ.

ಹಾಗಿದ್ದರೆ ಟೂರ್ನಿಯ ಮೊದಲ 3 ಸುತ್ತಿನ ಪಂದ್ಯಗಳು ಮುಕ್ತಾಯವಾದ ಬಳಿಕ ಅಂಕಪಟ್ಟಿ ಹೇಗಿದೆ, ಯಾವ ತಂಡಗಳು ಟಾಪ್‌ 3 ಸ್ಥಾನ ಪಡೆದುಕೊಂಡಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಗ್ರೂಪ್‌ A
ಮುಂಬೈ – 3 ಪಂದ್ಯ, 3 ಗೆಲುವು, 12 ಅಂಕ
ತ್ರಿಪುರ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ
ಕೇರಳ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ

ಗ್ರೂಪ್‌ B

ವಿದರ್ಭ – 3 ಪಂದ್ಯ, 3 ಗೆಲುವು, 12 ಅಂಕ
ಸರ್ವಿಸಸ್ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ
ಹೈದರಾಬಾದ್ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ‌

ಗ್ರೂಪ್‌ C

ಕರ್ನಾಟಕ – 3 ಪಂದ್ಯ, 3 ಗೆಲುವು, 12 ಅಂಕ
ಹರಿಯಾಣ – 3 ಪಂದ್ಯ, 3 ಗೆಲುವು, 12 ಅಂಕ
ಚಂಡೀಗಢ – 3 ಪಂದ್ಯ, 2 ಗೆಲುವು,‌ 1 ಸೋಲು, 8 ಅಂಕ

ಗ್ರೂಪ್‌ D

ರಾಜಸ್ಥಾನ್ – 3 ಪಂದ್ಯ, 3 ಗೆಲುವು, 12 ಅಂಕ
ಗುಜರಾತ್ – 3 ಪಂದ್ಯ, 2 ಗೆಲುವು, 1 ಸೋಲು 8 ಅಂಕ
ಅಸ್ಸಾಂ – 2 ಪಂದ್ಯ, 1 ಗೆಲುವು, 1 ಸೋಲು, 4 ಅಂಕ

ಗ್ರೂಪ್‌ E

ಮಧ್ಯ ಪ್ರದೇಶ – 3 ಪಂದ್ಯ, 3 ಗೆಲುವು, 12 ಅಂಕ
ತಮಿಳುನಾಡು – 2 ಪಂದ್ಯ, 2 ಗೆಲುವು, 8 ಅಂಕ
ಬೆಂಗಾಳ್ – 3 ಪಂದ್ಯ, 2 ಗೆಲುವು, 1 ಸೋಲು 8 ಅಂಕ

andolana

Recent Posts

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

1 hour ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

2 hours ago

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ರೈತ ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ…

2 hours ago

ಹಿರೀಕಾಟಿಯಲ್ಲಿ ಅಂಬೇಡ್ಕರ್‌ ಪ್ರತಿಮೆ ನಿರ್ಮಾಣ ಸಂಬಂಧ ಮುಖಂಡರೊಂದಿಗೆ ಚರ್ಚೆ

ಮೈಸೂರು: ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ…

3 hours ago

ರಾಮನಗರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್‌…

3 hours ago