ಕ್ರೀಡೆ

Vijay Hazare Trophy 2023: ರೌಂಡ್‌ 3 ಪಂದ್ಯಗಳ ಮುಕ್ತಾಯದ ಬಳಿಕ ಅಗ್ರಸ್ಥಾನದಲ್ಲಿವೆ ಈ 4 ತಂಡಗಳು

ಸದ್ಯ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯ ರೌಂಡ್‌ 3 ಪಂದ್ಯಗಳು ನಿನ್ನೆ ( ನವೆಂಬರ್‌ 27 ) ಮುಕ್ತಾಯಗೊಂಡಿವೆ. ಇನ್ನು ಕರ್ನಾಟಕ ತಂಡ ರೌಂಡ್‌ 3 ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಸತತ ಮೂರನೇ ಜಯ ಸಾಧಿಸಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ.

ಮೊದಲಿಗೆ ಜಮ್ಮು ಕಾಶ್ಮೀರದ ವಿರುದ್ಧ ಕಣಕ್ಕಿಳಿದು 222 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದ ಕರ್ನಾಟಕ ಎರಡನೇ ಪಂದ್ಯದಲ್ಲಿ ಉತ್ತರಾಖಂಡ ತಂಡದ ವಿರುದ್ಧ 52 ಪಂದ್ಯಗಳ ಜಯ ದಾಖಲಿಸಿತ್ತು. ಹೀಗೆ ಹ್ಯಾಟ್ರಿಕ್‌ ಜಯ ಸಾಧಿಸಿರುವ ಕರ್ನಾಟಕ ಕರ್ನಾಟಕ ಗ್ರೂಪ್‌ ಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಇನ್ನು ಮುಂಬೈ, ವಿದರ್ಭ, ರಾಜಸ್ಥಾನ್‌ ಹಾಗೂ ಮಧ್ಯ ಪ್ರದೇಶ ತಂಡಗಳೂ ಸಹ ತಮ್ಮ ತಮ್ಮ ಅಂಕಪಟ್ಟಿಗಳಲ್ಲಿ ಹ್ಯಾಟ್ರಿಕ್‌ ಜಯದೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿವೆ.

ಹಾಗಿದ್ದರೆ ಟೂರ್ನಿಯ ಮೊದಲ 3 ಸುತ್ತಿನ ಪಂದ್ಯಗಳು ಮುಕ್ತಾಯವಾದ ಬಳಿಕ ಅಂಕಪಟ್ಟಿ ಹೇಗಿದೆ, ಯಾವ ತಂಡಗಳು ಟಾಪ್‌ 3 ಸ್ಥಾನ ಪಡೆದುಕೊಂಡಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಗ್ರೂಪ್‌ A
ಮುಂಬೈ – 3 ಪಂದ್ಯ, 3 ಗೆಲುವು, 12 ಅಂಕ
ತ್ರಿಪುರ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ
ಕೇರಳ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ

ಗ್ರೂಪ್‌ B

ವಿದರ್ಭ – 3 ಪಂದ್ಯ, 3 ಗೆಲುವು, 12 ಅಂಕ
ಸರ್ವಿಸಸ್ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ
ಹೈದರಾಬಾದ್ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ‌

ಗ್ರೂಪ್‌ C

ಕರ್ನಾಟಕ – 3 ಪಂದ್ಯ, 3 ಗೆಲುವು, 12 ಅಂಕ
ಹರಿಯಾಣ – 3 ಪಂದ್ಯ, 3 ಗೆಲುವು, 12 ಅಂಕ
ಚಂಡೀಗಢ – 3 ಪಂದ್ಯ, 2 ಗೆಲುವು,‌ 1 ಸೋಲು, 8 ಅಂಕ

ಗ್ರೂಪ್‌ D

ರಾಜಸ್ಥಾನ್ – 3 ಪಂದ್ಯ, 3 ಗೆಲುವು, 12 ಅಂಕ
ಗುಜರಾತ್ – 3 ಪಂದ್ಯ, 2 ಗೆಲುವು, 1 ಸೋಲು 8 ಅಂಕ
ಅಸ್ಸಾಂ – 2 ಪಂದ್ಯ, 1 ಗೆಲುವು, 1 ಸೋಲು, 4 ಅಂಕ

ಗ್ರೂಪ್‌ E

ಮಧ್ಯ ಪ್ರದೇಶ – 3 ಪಂದ್ಯ, 3 ಗೆಲುವು, 12 ಅಂಕ
ತಮಿಳುನಾಡು – 2 ಪಂದ್ಯ, 2 ಗೆಲುವು, 8 ಅಂಕ
ಬೆಂಗಾಳ್ – 3 ಪಂದ್ಯ, 2 ಗೆಲುವು, 1 ಸೋಲು 8 ಅಂಕ

andolana

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

2 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

4 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

6 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

6 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

6 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

6 hours ago