ಕ್ರೀಡೆ

Vijay Hazare Trophy 2023: ರೌಂಡ್‌ 3 ಪಂದ್ಯಗಳ ಮುಕ್ತಾಯದ ಬಳಿಕ ಅಗ್ರಸ್ಥಾನದಲ್ಲಿವೆ ಈ 4 ತಂಡಗಳು

ಸದ್ಯ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯ ರೌಂಡ್‌ 3 ಪಂದ್ಯಗಳು ನಿನ್ನೆ ( ನವೆಂಬರ್‌ 27 ) ಮುಕ್ತಾಯಗೊಂಡಿವೆ. ಇನ್ನು ಕರ್ನಾಟಕ ತಂಡ ರೌಂಡ್‌ 3 ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಸತತ ಮೂರನೇ ಜಯ ಸಾಧಿಸಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ.

ಮೊದಲಿಗೆ ಜಮ್ಮು ಕಾಶ್ಮೀರದ ವಿರುದ್ಧ ಕಣಕ್ಕಿಳಿದು 222 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದ ಕರ್ನಾಟಕ ಎರಡನೇ ಪಂದ್ಯದಲ್ಲಿ ಉತ್ತರಾಖಂಡ ತಂಡದ ವಿರುದ್ಧ 52 ಪಂದ್ಯಗಳ ಜಯ ದಾಖಲಿಸಿತ್ತು. ಹೀಗೆ ಹ್ಯಾಟ್ರಿಕ್‌ ಜಯ ಸಾಧಿಸಿರುವ ಕರ್ನಾಟಕ ಕರ್ನಾಟಕ ಗ್ರೂಪ್‌ ಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಇನ್ನು ಮುಂಬೈ, ವಿದರ್ಭ, ರಾಜಸ್ಥಾನ್‌ ಹಾಗೂ ಮಧ್ಯ ಪ್ರದೇಶ ತಂಡಗಳೂ ಸಹ ತಮ್ಮ ತಮ್ಮ ಅಂಕಪಟ್ಟಿಗಳಲ್ಲಿ ಹ್ಯಾಟ್ರಿಕ್‌ ಜಯದೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿವೆ.

ಹಾಗಿದ್ದರೆ ಟೂರ್ನಿಯ ಮೊದಲ 3 ಸುತ್ತಿನ ಪಂದ್ಯಗಳು ಮುಕ್ತಾಯವಾದ ಬಳಿಕ ಅಂಕಪಟ್ಟಿ ಹೇಗಿದೆ, ಯಾವ ತಂಡಗಳು ಟಾಪ್‌ 3 ಸ್ಥಾನ ಪಡೆದುಕೊಂಡಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಗ್ರೂಪ್‌ A
ಮುಂಬೈ – 3 ಪಂದ್ಯ, 3 ಗೆಲುವು, 12 ಅಂಕ
ತ್ರಿಪುರ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ
ಕೇರಳ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ

ಗ್ರೂಪ್‌ B

ವಿದರ್ಭ – 3 ಪಂದ್ಯ, 3 ಗೆಲುವು, 12 ಅಂಕ
ಸರ್ವಿಸಸ್ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ
ಹೈದರಾಬಾದ್ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ‌

ಗ್ರೂಪ್‌ C

ಕರ್ನಾಟಕ – 3 ಪಂದ್ಯ, 3 ಗೆಲುವು, 12 ಅಂಕ
ಹರಿಯಾಣ – 3 ಪಂದ್ಯ, 3 ಗೆಲುವು, 12 ಅಂಕ
ಚಂಡೀಗಢ – 3 ಪಂದ್ಯ, 2 ಗೆಲುವು,‌ 1 ಸೋಲು, 8 ಅಂಕ

ಗ್ರೂಪ್‌ D

ರಾಜಸ್ಥಾನ್ – 3 ಪಂದ್ಯ, 3 ಗೆಲುವು, 12 ಅಂಕ
ಗುಜರಾತ್ – 3 ಪಂದ್ಯ, 2 ಗೆಲುವು, 1 ಸೋಲು 8 ಅಂಕ
ಅಸ್ಸಾಂ – 2 ಪಂದ್ಯ, 1 ಗೆಲುವು, 1 ಸೋಲು, 4 ಅಂಕ

ಗ್ರೂಪ್‌ E

ಮಧ್ಯ ಪ್ರದೇಶ – 3 ಪಂದ್ಯ, 3 ಗೆಲುವು, 12 ಅಂಕ
ತಮಿಳುನಾಡು – 2 ಪಂದ್ಯ, 2 ಗೆಲುವು, 8 ಅಂಕ
ಬೆಂಗಾಳ್ – 3 ಪಂದ್ಯ, 2 ಗೆಲುವು, 1 ಸೋಲು 8 ಅಂಕ

andolana

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

3 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

4 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

4 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

5 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

5 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

5 hours ago