ಕ್ರೀಡೆ

ವಿಜಯ್‌ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ಸತತ 4ನೇ ಜಯ

ಅಹ್ಮದಾಬಾದ್‌ : ಕರ್ನಾಟಕದ ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ದಾಳಿಯ ಮುಂದೆ ನಲುಗಿದ ಬಿಹಾರ ತಂಡ ವಿಜಯ್‌ ಹಜಾರೆ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಕರ್ನಾಟಕ ಮುಂದೆ ಮಂಡಿಯೂರಿದೆ.

ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದ ಎ ಗ್ರೌಂಡ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಿಹಾರ ನೀಡಿದ 217 ರನ್‌ ಗುರಿಯನ್ನು ಸರಾಗವಾಗಿ ಬೆನ್ನಟ್ಟಿದ ಕರ್ನಾಟಕ ತಂಡ 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ ʼಗ್ರೂಪ್‌ ಸಿʼ ಯಲ್ಲಿ ಅಗ್ರಸ್ಥಾನಕ್ಕೇರಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಬಿಹಾರ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ ಕೇವಲ 217 ರನ್‌ ಗಳಿಸಲಷ್ಟೆ ಶಕ್ತರಾದರು. ಆರಂಭಿಕ ಆಘಾತ ಅನುಭವಿಸಿದ ಬಿಹಾರ್‌ ಅಲೋಕ್‌ ಕುಮಾರ್‌ (7) ಬೇಗನೆ ವಿಕೆಟ್‌ ಕಳೆದುಕೊಂಡರು. ಶರ್ಮನ್‌ ನಿಗ್ರೋಧ್‌ 21, ಬಬುಲ್‌ ಕುಮಾರ್‌ 17, ಬಿಪಿನ್‌ ಸೌರಭ್‌ 8 ರನ್‌ ಗಳಿಸಿದರು.

ತಂಡ ಮೇಲಿಂದ ಮೇಲೆ ವಿಕೆಟ್‌ ಕಳೆದುಕೊಳ್ಳುತ್ತಿದ್ದರೂ ಸಹಾ ಏಕಾಂಗಿ ಹೋರಾಟ ನಡೆಸಿದ ಸಕಿಬುಲ್‌ ಗಣಿ ಅವರು ಆಕರ್ಷಕ ಶತಕ ದಾಖಲಿಸಿದರು. 100 ಎಸೆತಗಳನ್ನು ಎದುರಿಸಿದ ಅವರು 9 ಬೌಂಡರಿ ಮತ್ತು 5 ಸಿಕ್ಸರ್‌ ಸಹಿತ 113 ರನ್‌ ಗಳಿಸಿ ತಂಡದ ಮೊತ್ತ 200 ಗಡಿ ದಾಟಲು ಸಹಕರಿಸಿದರು.

ಕರ್ನಾಟಕ ಪರ ಸುಚಿತ್‌ 3, ಕಾವೇರಪ್ಪ, ವೈಶಾಕ್‌ ವಿಜಯ್‌ಕುಮಾರ್‌ ಮತ್ತು ಆರ್‌ ಸಮರ್ಥ್‌ ತಲಾ 1 ವಿಕೆಟ್‌ ಪಡೆದರು.

ಬಿಹಾರ ನೀಡಿದ 217 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಕರ್ನಾಟಕ ಕೇವಲ 33.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 218 ಬಾರಿಸುವ ಮೂಲಕ ಸಿ ಗ್ರೂಪ್‌ನಲ್ಲಿ ಸತತ ನಾಲ್ಕನೇ ಗೆಲುವು ದಾಖಲಿಸಿ ಟೇಬಲ್‌ ನಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ.

ಆರಂಭದಲ್ಲಿ ಆರ್‌.ಸಮರ್ಥ್‌(6) ಬೇಗನೆ ಔಟಾದರು. ನಾಯಕ ಮಯಾಕ್‌ ಅಗರ್ವಾಲ್‌ (28) ರನ್‌ ತಂಡಕ್ಕೆ ಕಾಣಿಕೆ ನೀಡಿದರು. ನಿಖಿನ್‌ ಜೋಸ್‌ (69) ಮತ್ತು ದೇವ್‌ದತ್‌ ಪಡಿಕ್ಕಲ್‌ (93) ತಂಡವನ್ನು ಗೆಲುವಿನ ಸನಿಹ ಕೊಂಡ್ಯೊಯ್ದರು. ಮನೀಶ್‌ ಪಾಂಡೆ 17 ರನ್‌ ಗಳಿಸಿ ಅಜೇಯರಾಗಿ ಉಳಿದು ತಂಡಕ್ಕೆ ಜಯ ತಂದುಕೊಟ್ಟರು. ಪಡಿಕ್ಕಲ್‌ ಅವರ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 5 ಸಿಕ್ಸರ್‌ಗಳಿದ್ದವು.

andolanait

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

3 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

4 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

4 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

4 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

5 hours ago