ಕ್ರೀಡೆ

ಮಯಂಕ್‌ ಪಡೆಗೆ ವಿಜಯ್‌ ಹಜಾರೆ ಟ್ರೋಫಿ

ವಡೋದರಾ: ಇಲ್ಲಿನ ಕೊಟಂಬಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ವಿಜಯ್‌ ಹಜಾರೆ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡ ವಿದರ್ಭ ತಂಡದ ವಿರುದ್ಧ 36 ರನ್‌ಗಳ ಗೆಲುವನ್ನು ದಾಖಲಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ವಿದರ್ಭ ಕರ್ನಾಟಕ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 348 ರನ್‌ ಕಲೆಹಾಕಿ ವಿದರ್ಭ ತಂಡಕ್ಕೆ 349 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ವಿದರ್ಭ 48.2 ಓವರ್‌ಗಳಲ್ಲಿ 312 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಕರ್ನಾಟಕ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ‌ ಮಯಾಂಕ್‌ ಅಗರ್ವಾಲ್‌ 32 ಹಾಗೂ ದೇವದತ್‌ ಪಡಿಕ್ಕಲ್‌ 8 ರನ್‌ ಬಾರಿಸಿದರೆ, ಅನೀಶ್‌ ಕೆವಿ 21 ರನ್‌ ಸ್ಮರಣ್‌ ರವಿಚಂದ್ರನ್‌ 101 ಬಾರಿಸಿದರು. ಇನ್ನುಳಿದಂತೆ ಕೃಷ್ಣನ್‌ ಶ್ರೀಜಿತ್‌ 78 ರನ್‌ ಬಾರಿಸಿ ಆಸರೆಯಾದರೆ, ಅಭಿನವ್‌ ಮನೋಹರ್‌ 42 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 79 ಸಿಡಿಸಿದರು, ಹಾರ್ದಿಕ್‌ ರಾಜ್‌ ಅಜೇಯ 12 ಹಾಗೂ ಶ್ರೇಯಸ್‌ ಗೋಪಾಲ್‌ ಅಜೇಯ 3 ರನ್‌ ಗಳಿಸಿದರು.

ವಿದರ್ಭ ಪರ ದರ್ಶನ್‌ ನಾಲ್ಕಂಡೆ ಹಾಗೂ ನಚಿಕೇತ್‌ ತಲಾ 2 ವಿಕೆಟ್‌ ಪಡೆದರೆ, ಯಶ್‌ ಠಾಕೂರ್‌ ಹಾಗೂ ಯಶ್ ಖಡಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಿದರ್ಭ ಇನ್ನಿಂಗ್ಸ್:‌ ಧೃವ್‌ ಶೋರೆ 110, ಯಶ್‌ ರಾಥೋಡ್‌ 22, ಕರುಣ್‌ ನಾಯರ್‌ 27, ಯಶ್‌ ಖಡಮ್‌ 15, ಜಿತೇಶ್‌ ಶರ್ಮಾ 34, ಶುಭಮ್‌ ದುಬೆ 8, ಅಪೂರ್ವ್‌ ವಾಂಖಡೆ 12, ಹರ್ಷ್‌ ದುಬೆ 63, ನಚಿಕೇತ್‌ 5, ದರ್ಶನ್‌ ನಾಲ್ಕಂಡೆ 11 ರನ್ ಹಾಗೂ‌ ಯಾವುದೇ ರನ್‌ ಗಳಿಸದ ಯಶ್‌ ಠಾಕೂರ್‌ ಅಜೇಯರಾಗಿ ಉಳಿದರು.

ಕರ್ನಾಟಕದ ಪರ ವಾಸುಕಿ ಕೌಶಿಕ್‌, ಪ್ರಸಿದ್ಧ್‌ ಕೃಷ್ಣ ಹಾಗೂ ಅಭಿಲಾಷ್‌ ಶೆಟ್ಟಿ ತಲಾ 3 ವಿಕೆಟ್‌ ಪಡೆದರೆ, ಹಾರ್ದಿಕ್‌ ರಾಜ್‌ 1 ವಿಕೆಟ್‌ ಪಡೆದರು.

ಪಂದ್ಯದಲ್ಲಿ ಅಬ್ಬರದ ಶತಕ ಸಿಡಿಸಿದ ಸಮರ್ಥ್‌ ರವಿಚಂದ್ರನ್‌ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಟೂರ್ನಿಯಲ್ಲಿ ಅತ್ಯುತ್ತಮ ಆಟವನ್ನಾಡಿದ ಕರುಣ್‌ ನಾಯರ್‌ ಸರಣಿಶ್ರೇಷ್ಠ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

5 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

5 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

6 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

6 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

6 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

8 hours ago