ಕ್ರೀಡೆ

ಮಯಂಕ್‌ ಪಡೆಗೆ ವಿಜಯ್‌ ಹಜಾರೆ ಟ್ರೋಫಿ

ವಡೋದರಾ: ಇಲ್ಲಿನ ಕೊಟಂಬಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ವಿಜಯ್‌ ಹಜಾರೆ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡ ವಿದರ್ಭ ತಂಡದ ವಿರುದ್ಧ 36 ರನ್‌ಗಳ ಗೆಲುವನ್ನು ದಾಖಲಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ವಿದರ್ಭ ಕರ್ನಾಟಕ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 348 ರನ್‌ ಕಲೆಹಾಕಿ ವಿದರ್ಭ ತಂಡಕ್ಕೆ 349 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ವಿದರ್ಭ 48.2 ಓವರ್‌ಗಳಲ್ಲಿ 312 ರನ್‌ಗಳಿಗೆ ಆಲ್‌ಔಟ್‌ ಆಯಿತು.

ಕರ್ನಾಟಕ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ‌ ಮಯಾಂಕ್‌ ಅಗರ್ವಾಲ್‌ 32 ಹಾಗೂ ದೇವದತ್‌ ಪಡಿಕ್ಕಲ್‌ 8 ರನ್‌ ಬಾರಿಸಿದರೆ, ಅನೀಶ್‌ ಕೆವಿ 21 ರನ್‌ ಸ್ಮರಣ್‌ ರವಿಚಂದ್ರನ್‌ 101 ಬಾರಿಸಿದರು. ಇನ್ನುಳಿದಂತೆ ಕೃಷ್ಣನ್‌ ಶ್ರೀಜಿತ್‌ 78 ರನ್‌ ಬಾರಿಸಿ ಆಸರೆಯಾದರೆ, ಅಭಿನವ್‌ ಮನೋಹರ್‌ 42 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್‌ ಸಹಿತ 79 ಸಿಡಿಸಿದರು, ಹಾರ್ದಿಕ್‌ ರಾಜ್‌ ಅಜೇಯ 12 ಹಾಗೂ ಶ್ರೇಯಸ್‌ ಗೋಪಾಲ್‌ ಅಜೇಯ 3 ರನ್‌ ಗಳಿಸಿದರು.

ವಿದರ್ಭ ಪರ ದರ್ಶನ್‌ ನಾಲ್ಕಂಡೆ ಹಾಗೂ ನಚಿಕೇತ್‌ ತಲಾ 2 ವಿಕೆಟ್‌ ಪಡೆದರೆ, ಯಶ್‌ ಠಾಕೂರ್‌ ಹಾಗೂ ಯಶ್ ಖಡಮ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಿದರ್ಭ ಇನ್ನಿಂಗ್ಸ್:‌ ಧೃವ್‌ ಶೋರೆ 110, ಯಶ್‌ ರಾಥೋಡ್‌ 22, ಕರುಣ್‌ ನಾಯರ್‌ 27, ಯಶ್‌ ಖಡಮ್‌ 15, ಜಿತೇಶ್‌ ಶರ್ಮಾ 34, ಶುಭಮ್‌ ದುಬೆ 8, ಅಪೂರ್ವ್‌ ವಾಂಖಡೆ 12, ಹರ್ಷ್‌ ದುಬೆ 63, ನಚಿಕೇತ್‌ 5, ದರ್ಶನ್‌ ನಾಲ್ಕಂಡೆ 11 ರನ್ ಹಾಗೂ‌ ಯಾವುದೇ ರನ್‌ ಗಳಿಸದ ಯಶ್‌ ಠಾಕೂರ್‌ ಅಜೇಯರಾಗಿ ಉಳಿದರು.

ಕರ್ನಾಟಕದ ಪರ ವಾಸುಕಿ ಕೌಶಿಕ್‌, ಪ್ರಸಿದ್ಧ್‌ ಕೃಷ್ಣ ಹಾಗೂ ಅಭಿಲಾಷ್‌ ಶೆಟ್ಟಿ ತಲಾ 3 ವಿಕೆಟ್‌ ಪಡೆದರೆ, ಹಾರ್ದಿಕ್‌ ರಾಜ್‌ 1 ವಿಕೆಟ್‌ ಪಡೆದರು.

ಪಂದ್ಯದಲ್ಲಿ ಅಬ್ಬರದ ಶತಕ ಸಿಡಿಸಿದ ಸಮರ್ಥ್‌ ರವಿಚಂದ್ರನ್‌ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಟೂರ್ನಿಯಲ್ಲಿ ಅತ್ಯುತ್ತಮ ಆಟವನ್ನಾಡಿದ ಕರುಣ್‌ ನಾಯರ್‌ ಸರಣಿಶ್ರೇಷ್ಠ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago