ಗುಜರಾತ್ : ವಿಜಯ ಹಜಾರೆ ಟೂರ್ನಿಯಲ್ಲಿ ಸಿ ಗ್ರೂಪ್ನಲ್ಲಿ ಆಡುತ್ತಿರುವ ಕರ್ನಾಟಕ ತಂಡ ಅದೇ ಗ್ರೂಪ್ನ ಹರ್ಯಾಣ ತಂಡದ ವಿರುದ್ಧ ಹೀನಾಯ ಸೋಲು ಕಂಡಿದೆ. ಆ ಮೂಲಕ ಈ ಟೂರ್ನಿಯಲ್ಲಿನ ತನ್ನ ಅಜೇಯ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ. ಇತ್ತ ತಾನಾಡಿದ ಎಲ್ಲಾ ಪಂದ್ಯಗಳಲ್ಲಿ ಜಯ ದಾಖಲಿಸಿರುವ ಹರ್ಯಾಣ ಗ್ರೂಪ್ನಲ್ಲಿ ಅಗ್ರಸ್ಥಾನಕ್ಕೇರಿದೆ.
ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಜಯ ಹಜಾರೆ ಟೂರ್ನಿಯ ಗ್ರೂಪ್ ಸಿ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಹರ್ಯಾಣ ತಂಡ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡಕ್ಕೆ ನಿರೀಕ್ಷಿತ ಆರಂಭ ದೊರಕಿರಲಿಲ್ಲ. ಆರಂಭಿಕ ಆಟಗಾರ ಆಟಗಾರ ನಾಯಕ ಮಯಾಂಕ್ ಅಗರ್ವಾಲ್ (0) ಶೂನ್ಯಕ್ಕೆ ಔಟಾದರೆ, ರವಿಕುಮಾರ್ ಸಮರ್ಥ್ 1 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಕ್ರೀಸ್ಗೆ ಬಂದ ಬಿ.ಆರ್ ಶರತ್ (15), ನಿಕಿಕ್ ಜೋಸ್ (9) ಹಾಗೂ ಮನೀಷ್ ಪಾಂಡೆ (24) ಯಾರೊಬ್ಬರಿಂದಲೂ ಭದ್ರ ಇನ್ನಿಂಗ್ಸ್ ದೊರೆಯಲಿಲ್ಲ. ಬಂದ ದಾರಿಯಲ್ಲಿಯೇ ಬೇಗನೆ ನಿರ್ಗಮಿಸಿದರು. ಇನ್ನು ಅಭಿನವ್ ಮನೋಹರ್ 3 ರನ್ಗಳಿಸಿದರೆ, ಮನೋಜ್ ಭಂಡಾಗೆ 8 ರನ್ಗಳಿಸಿ ವಿಕೆಟ್ ಕೈಚೆಲ್ಲಿದರು.
ಬಳಿಕ 10ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿಜಯಕುಮಾರ್ ವೈಶಾಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ತಾವೆದುರಿಸಿದ 61 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 54 ರನ್ಗಳ ಚಚ್ಚಿದರು. ಈ ಅರ್ಧಶತಕದ ನೆರವಿನಿಂದ ಕರ್ನಾಟಕ ತಂಡವು 43.5 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 143 ರನ್ಗಳಿಸಿ ಆಲೌಟ್ ಆಯಿತು.
ಹರ್ಯಾಣ ಪರ ಸುಮಿತ್ ಕುಮಾರ್ 3, ಯುಜ್ವೇಂದ್ರ ಚಹಾಲ್ ಹಾಗೂ ನಿಶಾಂತ್ ಸಿಂಧು ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.
ಇತ್ತಾ ಕರ್ನಾಟಕ ನೀಡಿದ 144 ರನ್ಗಳ ಸುಲಭ ಗುರಿ ಬೆನ್ನತ್ತಿದ ಹರ್ಯಾಣ ತಂಡಕ್ಕೂ ಕೂಡ ಉತ್ತಮ ಆರಂಭ ಸಿಗಲಿಲ್ಲ. ಕೇವಲ 35 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ ನಿಶಾಂತ್ ಸಿಂಧು (43) ಹಾಗೂ ರೋಹಿತ್ ಪ್ರಮೋದ್ ಶರ್ಮಾ (63) ತಂಡಕ್ಕೆ ಆಸರೆಯಾದರು.
31.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಹರ್ಯಾಣ ತಂಡವು ಗೆಲುವಿನ ದಡ ಸೇರಿತು. ಈ ಮೂಲಕ ಹರ್ಯಾಣ ತಂಡವು 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಕರ್ನಾಟಕ ಪರ ವಾಸುಕಿ ಕೌಶಿಕ್ 2, ಜೆ ಸುಜಿತ್ 2 ಮತ್ತು ವೈಶಾಖ್ 1 ವಿಕೆಟ್ ಪಡೆದರು.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…