ಕ್ರೀಡೆ

ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್‌ ಫೋಗಟ್‌ : ಅಖಾಡಕ್ಕಿಳಿಯಲು ಸಜ್ಜಾದ ಕುಸ್ತಿಪುಟು

ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ. ಕುಸ್ತಿ ನಿವೃತ್ತಿ ನಿರ್ಧಾರದಿಂದ ಹೊರಬಂದಿರುವುದಾಗಿ ಅವರು ಶುಕ್ರವಾರ ದೃಢಪಡಿಸಿದ್ದಾರೆ.

ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಫೈನಲ್‌ನಲ್ಲಿ ವಿವಾದಾತ್ಮಕ ಅನರ್ಹತೆಯ ನಂತರ ಫೋಗಟ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಸೆಮಿಫೈನಲ್‌ನಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಚಿನ್ನದ ಪದಕಕ್ಕೆ ಅವರು ಲಗ್ಗೆ ಇಟ್ಟಿದ್ದರು.

ಇದನ್ನು ಓದಿ: ಎಸ್‌ಸಿ,ಎಸ್‌ಟಿಗೆ ಮೀಸಲಿಟ್ಟ 50ಸಾವಿರ ಕೋಟಿ ದುರಪಯೋಗ : ತಮ್ಮದೇ ಸರ್ಕಾರದ ವಿರುದ್ಧ ಆರೋಪ

ಫೈನಲ್ ನಲ್ಲಿ ಅಮೆರಿಕದ ಸಾರಾ ಆನ್ ಹಿಲ್ಡೆಬ್ರಾಂಡ್ ವಿರುದ್ಧ ಸ್ಪರ್ಧಿಸಲು ಸಿದ್ಧರಾಗಿದ್ದರು. ಆದರೆ ತೂಕದ ಮಿತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಅನರ್ಹಗೊಳಿಸಲಾಗಿತ್ತು. ಇದರಿಂದ ಒಲಿಂಪಿಕ್ ಪದಕವನ್ನು ಕಳೆದುಕೊಂಡಿದ್ದ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದರು. ಆದರೆ, ಇದೀಗ ತನ್ನ ನಿವೃತ್ತಿ ನಿರ್ಧಾರವನ್ನು ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಫೋಗಟ್, ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟವೇ ಅಂತಿಮವೇ ಎಂದು ಜನರು ಕೇಳುತ್ತಲೇ ಇದ್ದರು. ಇದಕ್ಕೆ ದೀರ್ಘಕಾಲದವರೆಗೆ ನನ್ನ ಬಳಿ ಉತ್ತರವಿರಲಿಲ್ಲ. ಒತ್ತಡದಿಂದ, ನಿರೀಕ್ಷೆಗಳಿಂದ, ನನ್ನ ಸ್ವಂತ ಮಹತ್ವಾಕಾಂಕ್ಷೆಗಳಿಂದ ದೂರವಿರಬೇಕಾಗಿತ್ತು. ವರ್ಷಗಳಲ್ಲಿ ಮೊದಲ ಬಾರಿಗೆ ನನ್ನಷ್ಟಕ್ಕೆ ನಾನೇ ಆತ್ಮಾವಲೋಕನ ಮಾಡಿಕೊಂಡೆ, “ನನ್ನ ಕ್ರೀಡಾ ಬದುಕು, ಸಾಧನೆಗಳು, ಸಂದ ಪ್ರಶಸ್ತಿ ಪುರಸ್ಕಾರಗಳು, ಆಘಾತ, ತ್ಯಾಗ ಎಲ್ಲವನ್ನೂ ಅರ್ಥ ಮಾಡಿಕೊಂಡೆ. ಪ್ರಪಂಚವು ಎಂದಿಗೂ ನೋಡದ ನನ್ನನ್ನು ನಾನು ಅರ್ಥಮಾಡಿಕೊಳ್ಳಲು ಸಮಯ ತೆಗೆದುಕೊಂಡೆ. ಅದರಲ್ಲಿ ನಾನು ಸತ್ಯವನ್ನು ಕಂಡುಕೊಂಡಿದ್ದೇನೆ, ಇನ್ನೂ ಈ ಕ್ರೀಡೆಯನ್ನು ಪ್ರೀತಿಸುತ್ತೇನೆ. ಇನ್ನೂ ಸ್ಪರ್ಧಿಸಲು ಬಯಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

4 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

5 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

5 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

5 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

5 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

5 hours ago