ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ. ಕುಸ್ತಿ ನಿವೃತ್ತಿ ನಿರ್ಧಾರದಿಂದ ಹೊರಬಂದಿರುವುದಾಗಿ ಅವರು ಶುಕ್ರವಾರ ದೃಢಪಡಿಸಿದ್ದಾರೆ.
ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಫೈನಲ್ನಲ್ಲಿ ವಿವಾದಾತ್ಮಕ ಅನರ್ಹತೆಯ ನಂತರ ಫೋಗಟ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಸೆಮಿಫೈನಲ್ನಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಚಿನ್ನದ ಪದಕಕ್ಕೆ ಅವರು ಲಗ್ಗೆ ಇಟ್ಟಿದ್ದರು.
ಇದನ್ನು ಓದಿ: ಎಸ್ಸಿ,ಎಸ್ಟಿಗೆ ಮೀಸಲಿಟ್ಟ 50ಸಾವಿರ ಕೋಟಿ ದುರಪಯೋಗ : ತಮ್ಮದೇ ಸರ್ಕಾರದ ವಿರುದ್ಧ ಆರೋಪ
ಫೈನಲ್ ನಲ್ಲಿ ಅಮೆರಿಕದ ಸಾರಾ ಆನ್ ಹಿಲ್ಡೆಬ್ರಾಂಡ್ ವಿರುದ್ಧ ಸ್ಪರ್ಧಿಸಲು ಸಿದ್ಧರಾಗಿದ್ದರು. ಆದರೆ ತೂಕದ ಮಿತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಅನರ್ಹಗೊಳಿಸಲಾಗಿತ್ತು. ಇದರಿಂದ ಒಲಿಂಪಿಕ್ ಪದಕವನ್ನು ಕಳೆದುಕೊಂಡಿದ್ದ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದರು. ಆದರೆ, ಇದೀಗ ತನ್ನ ನಿವೃತ್ತಿ ನಿರ್ಧಾರವನ್ನು ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಫೋಗಟ್, ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟವೇ ಅಂತಿಮವೇ ಎಂದು ಜನರು ಕೇಳುತ್ತಲೇ ಇದ್ದರು. ಇದಕ್ಕೆ ದೀರ್ಘಕಾಲದವರೆಗೆ ನನ್ನ ಬಳಿ ಉತ್ತರವಿರಲಿಲ್ಲ. ಒತ್ತಡದಿಂದ, ನಿರೀಕ್ಷೆಗಳಿಂದ, ನನ್ನ ಸ್ವಂತ ಮಹತ್ವಾಕಾಂಕ್ಷೆಗಳಿಂದ ದೂರವಿರಬೇಕಾಗಿತ್ತು. ವರ್ಷಗಳಲ್ಲಿ ಮೊದಲ ಬಾರಿಗೆ ನನ್ನಷ್ಟಕ್ಕೆ ನಾನೇ ಆತ್ಮಾವಲೋಕನ ಮಾಡಿಕೊಂಡೆ, “ನನ್ನ ಕ್ರೀಡಾ ಬದುಕು, ಸಾಧನೆಗಳು, ಸಂದ ಪ್ರಶಸ್ತಿ ಪುರಸ್ಕಾರಗಳು, ಆಘಾತ, ತ್ಯಾಗ ಎಲ್ಲವನ್ನೂ ಅರ್ಥ ಮಾಡಿಕೊಂಡೆ. ಪ್ರಪಂಚವು ಎಂದಿಗೂ ನೋಡದ ನನ್ನನ್ನು ನಾನು ಅರ್ಥಮಾಡಿಕೊಳ್ಳಲು ಸಮಯ ತೆಗೆದುಕೊಂಡೆ. ಅದರಲ್ಲಿ ನಾನು ಸತ್ಯವನ್ನು ಕಂಡುಕೊಂಡಿದ್ದೇನೆ, ಇನ್ನೂ ಈ ಕ್ರೀಡೆಯನ್ನು ಪ್ರೀತಿಸುತ್ತೇನೆ. ಇನ್ನೂ ಸ್ಪರ್ಧಿಸಲು ಬಯಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…