ಕ್ರೀಡೆ

ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್‌ ಫೋಗಟ್‌ : ಅಖಾಡಕ್ಕಿಳಿಯಲು ಸಜ್ಜಾದ ಕುಸ್ತಿಪುಟು

ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ. ಕುಸ್ತಿ ನಿವೃತ್ತಿ ನಿರ್ಧಾರದಿಂದ ಹೊರಬಂದಿರುವುದಾಗಿ ಅವರು ಶುಕ್ರವಾರ ದೃಢಪಡಿಸಿದ್ದಾರೆ.

ಕಳೆದ ವರ್ಷ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಫೈನಲ್‌ನಲ್ಲಿ ವಿವಾದಾತ್ಮಕ ಅನರ್ಹತೆಯ ನಂತರ ಫೋಗಟ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದರು. ಸೆಮಿಫೈನಲ್‌ನಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಚಿನ್ನದ ಪದಕಕ್ಕೆ ಅವರು ಲಗ್ಗೆ ಇಟ್ಟಿದ್ದರು.

ಇದನ್ನು ಓದಿ: ಎಸ್‌ಸಿ,ಎಸ್‌ಟಿಗೆ ಮೀಸಲಿಟ್ಟ 50ಸಾವಿರ ಕೋಟಿ ದುರಪಯೋಗ : ತಮ್ಮದೇ ಸರ್ಕಾರದ ವಿರುದ್ಧ ಆರೋಪ

ಫೈನಲ್ ನಲ್ಲಿ ಅಮೆರಿಕದ ಸಾರಾ ಆನ್ ಹಿಲ್ಡೆಬ್ರಾಂಡ್ ವಿರುದ್ಧ ಸ್ಪರ್ಧಿಸಲು ಸಿದ್ಧರಾಗಿದ್ದರು. ಆದರೆ ತೂಕದ ಮಿತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಅನರ್ಹಗೊಳಿಸಲಾಗಿತ್ತು. ಇದರಿಂದ ಒಲಿಂಪಿಕ್ ಪದಕವನ್ನು ಕಳೆದುಕೊಂಡಿದ್ದ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದರು. ಆದರೆ, ಇದೀಗ ತನ್ನ ನಿವೃತ್ತಿ ನಿರ್ಧಾರವನ್ನು ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಫೋಗಟ್, ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟವೇ ಅಂತಿಮವೇ ಎಂದು ಜನರು ಕೇಳುತ್ತಲೇ ಇದ್ದರು. ಇದಕ್ಕೆ ದೀರ್ಘಕಾಲದವರೆಗೆ ನನ್ನ ಬಳಿ ಉತ್ತರವಿರಲಿಲ್ಲ. ಒತ್ತಡದಿಂದ, ನಿರೀಕ್ಷೆಗಳಿಂದ, ನನ್ನ ಸ್ವಂತ ಮಹತ್ವಾಕಾಂಕ್ಷೆಗಳಿಂದ ದೂರವಿರಬೇಕಾಗಿತ್ತು. ವರ್ಷಗಳಲ್ಲಿ ಮೊದಲ ಬಾರಿಗೆ ನನ್ನಷ್ಟಕ್ಕೆ ನಾನೇ ಆತ್ಮಾವಲೋಕನ ಮಾಡಿಕೊಂಡೆ, “ನನ್ನ ಕ್ರೀಡಾ ಬದುಕು, ಸಾಧನೆಗಳು, ಸಂದ ಪ್ರಶಸ್ತಿ ಪುರಸ್ಕಾರಗಳು, ಆಘಾತ, ತ್ಯಾಗ ಎಲ್ಲವನ್ನೂ ಅರ್ಥ ಮಾಡಿಕೊಂಡೆ. ಪ್ರಪಂಚವು ಎಂದಿಗೂ ನೋಡದ ನನ್ನನ್ನು ನಾನು ಅರ್ಥಮಾಡಿಕೊಳ್ಳಲು ಸಮಯ ತೆಗೆದುಕೊಂಡೆ. ಅದರಲ್ಲಿ ನಾನು ಸತ್ಯವನ್ನು ಕಂಡುಕೊಂಡಿದ್ದೇನೆ, ಇನ್ನೂ ಈ ಕ್ರೀಡೆಯನ್ನು ಪ್ರೀತಿಸುತ್ತೇನೆ. ಇನ್ನೂ ಸ್ಪರ್ಧಿಸಲು ಬಯಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

2 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

2 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

3 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

3 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

3 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

7 hours ago