ಕ್ರೀಡೆ

ವಿನೇಶ್‌ ಫೋಗಟ್‌ ಅನರ್ಹ: ಐಒಎ ಅಧ್ಯಕ್ಷೆ ಪಿಟಿ ಉಷಾ ಮೊದಲ ಪ್ರತಿಕ್ರಿಯೆ

ಪ್ಯಾರಿಸ್: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಕೇವಲ 100ಗ್ರಾಂ ತೂಕ ಹೆಚ್ಚಿದ್ದ ಕಾರಣಕ್ಕಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನದ ಪದಕದ ನಿರೀಕ್ಷೆ ಕಮರಿದೆ.

ಈ ನಡುವೆ ನಿರ್ಜಲೀಕರಣದಿಂದಾಗಿ ಬಳಲುತ್ತಿರುವ ವಿನೇಶ್‌ ಫೋಗಟ್‌ ಅವರನ್ನು ಕ್ಲಿನಿಕ್‌ಗೆ ದಾಖಲಿಸಲಾಗಿದೆ. ಇದೀಗ ವಿನೇಶ್‌ರನ್ನು ಭೇಟಿಯಾಗಿದ್ದ ಭಾರತೀಯ ಒಲಿಂಪಿಕ್ಸ್‌ ಅಧ್ಯಕ್ಷೆ ಪಿಟಿ ಉಷಾ ಅನರ್ಹದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿನೇಶ್‌ ಫೋಗಟ್‌ ಅವರ ಅನರ್ಹತೆ ಆಘಾತಕಾರಿಯಾಗಿದೆ. ವಿನೇಶ್‌ ಅವರಿಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ, ಭಾರತ ಸರ್ಕಾರ ಹಾಗೂ ಇಡೀ ದೇಶದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇವೆ. ಜೊತೆಗೆ ವಿನೇಶ್‌ಗೆ ಎಲ್ಲಾ ರೀತಿಯ ವೈದ್ಯಕೀಯ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇನ್ನೂ ವಿನೇಶ್‌ ಅವರ ಅನರ್ಹತೆ ಬಗ್ಗೆ ಮಾತನಾಡಿದ ಅವರು, ಅನರ್ಹತೆಯ ವಿರುದ್ಧ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ ನಿರಂತರವಾಗಿ ಧ್ವನಿ ಎತ್ತುತ್ತಿದೆ. ಡಬ್ಲ್ಯುಎಫ್‌ಐ ಕೂಡ ಒಲಿಂಪಿಕ್ಸ್‌ ಸಮಿತಿಗೆ ಪತ್ರ ಬರೆದು ವಿನೇಶ್‌ ಅವರ ಅನರ್ಹತೆ ಬಗ್ಗೆ ವಿರೋಧ ವ್ಯಕಪಡಿಸಿದೆ ಎಂದಿದ್ದಾರೆ.

ವಿನೇಶ್‌ ಅವರಿಗೆ ವ್ಯದ್ಯಕೀಯ ತಪಾಸಣೆ ನಡೆಸಲಾಗಿದ್ದು, ಸದ್ಯ ಆಕೆ ಆರೋಗ್ಯವಾಗಿದ್ದಾರೆ. ವಿನೇಶ್‌ ದೈಹಿಕವಾಗಿ ಚೆನ್ನಾಗಿದ್ದಾರೆ ಆದರೆ ಮಾನಸಿಕವಾಗಿ ಅವರು ತುಂಬಾ ಕುಗ್ಗಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೂ ತೂಕ ಹೆಚ್ಚಳದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಪರ್ದಿವಾಲಾ, ಕೆಲವೊಮ್ಮೆ ನಿರಂತರ ಪಂದ್ಯಗಳಿಂದ ಹೆಚ್ಚು ನೀರು ಕುಡಿಯಬೇಕಾಗುತ್ತದೆ. ಅಂತಹ ಪರಿಸ್ಥಿರಿಯಲ್ಲಿ ತೂಕ ಹೆಚ್ಚಾಗುತ್ತದೆ. ರಾತ್ರಿ ವಿನೇಶ್‌ನ ತೂಕ ಹೆಚ್ಚಾದಾಗ ಕಡಿಮೆ ಮಾಡಲು ವೈದ್ಯಕೀಯ ತಂಡ ಅನೇಕ ಪ್ರಯತ್ನ ಮಾಡಿತು, ಅವರ ಕೂದಲು ಹಾಗೂ ಉಗುರುಗಳನ್ನು ಕತ್ತರಿಸಲಾಯಿತು. ಆದರೆ ಬೆಳಿಗ್ಗೆ 7 ಗಂಟೆಗೆ ಅವರನ್ನು ತೂಕ ಮಾಡಿದಾಗ, ಅವರು ನಿಗದಿಗಿಂದ 100 ಗ್ರಾಂ ಹೆಚ್ಚು ತೂಕ ಇರುವುದು ಕಂಡುಬಂತು ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

9 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago