ಕ್ರೀಡೆ

ವಿನೇಶ್‌ ಫೋಗಟ್‌ ಅನರ್ಹ: ಐಒಎ ಅಧ್ಯಕ್ಷೆ ಪಿಟಿ ಉಷಾ ಮೊದಲ ಪ್ರತಿಕ್ರಿಯೆ

ಪ್ಯಾರಿಸ್: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಕೇವಲ 100ಗ್ರಾಂ ತೂಕ ಹೆಚ್ಚಿದ್ದ ಕಾರಣಕ್ಕಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನದ ಪದಕದ ನಿರೀಕ್ಷೆ ಕಮರಿದೆ.

ಈ ನಡುವೆ ನಿರ್ಜಲೀಕರಣದಿಂದಾಗಿ ಬಳಲುತ್ತಿರುವ ವಿನೇಶ್‌ ಫೋಗಟ್‌ ಅವರನ್ನು ಕ್ಲಿನಿಕ್‌ಗೆ ದಾಖಲಿಸಲಾಗಿದೆ. ಇದೀಗ ವಿನೇಶ್‌ರನ್ನು ಭೇಟಿಯಾಗಿದ್ದ ಭಾರತೀಯ ಒಲಿಂಪಿಕ್ಸ್‌ ಅಧ್ಯಕ್ಷೆ ಪಿಟಿ ಉಷಾ ಅನರ್ಹದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿನೇಶ್‌ ಫೋಗಟ್‌ ಅವರ ಅನರ್ಹತೆ ಆಘಾತಕಾರಿಯಾಗಿದೆ. ವಿನೇಶ್‌ ಅವರಿಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ, ಭಾರತ ಸರ್ಕಾರ ಹಾಗೂ ಇಡೀ ದೇಶದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇವೆ. ಜೊತೆಗೆ ವಿನೇಶ್‌ಗೆ ಎಲ್ಲಾ ರೀತಿಯ ವೈದ್ಯಕೀಯ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇನ್ನೂ ವಿನೇಶ್‌ ಅವರ ಅನರ್ಹತೆ ಬಗ್ಗೆ ಮಾತನಾಡಿದ ಅವರು, ಅನರ್ಹತೆಯ ವಿರುದ್ಧ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ ನಿರಂತರವಾಗಿ ಧ್ವನಿ ಎತ್ತುತ್ತಿದೆ. ಡಬ್ಲ್ಯುಎಫ್‌ಐ ಕೂಡ ಒಲಿಂಪಿಕ್ಸ್‌ ಸಮಿತಿಗೆ ಪತ್ರ ಬರೆದು ವಿನೇಶ್‌ ಅವರ ಅನರ್ಹತೆ ಬಗ್ಗೆ ವಿರೋಧ ವ್ಯಕಪಡಿಸಿದೆ ಎಂದಿದ್ದಾರೆ.

ವಿನೇಶ್‌ ಅವರಿಗೆ ವ್ಯದ್ಯಕೀಯ ತಪಾಸಣೆ ನಡೆಸಲಾಗಿದ್ದು, ಸದ್ಯ ಆಕೆ ಆರೋಗ್ಯವಾಗಿದ್ದಾರೆ. ವಿನೇಶ್‌ ದೈಹಿಕವಾಗಿ ಚೆನ್ನಾಗಿದ್ದಾರೆ ಆದರೆ ಮಾನಸಿಕವಾಗಿ ಅವರು ತುಂಬಾ ಕುಗ್ಗಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೂ ತೂಕ ಹೆಚ್ಚಳದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಪರ್ದಿವಾಲಾ, ಕೆಲವೊಮ್ಮೆ ನಿರಂತರ ಪಂದ್ಯಗಳಿಂದ ಹೆಚ್ಚು ನೀರು ಕುಡಿಯಬೇಕಾಗುತ್ತದೆ. ಅಂತಹ ಪರಿಸ್ಥಿರಿಯಲ್ಲಿ ತೂಕ ಹೆಚ್ಚಾಗುತ್ತದೆ. ರಾತ್ರಿ ವಿನೇಶ್‌ನ ತೂಕ ಹೆಚ್ಚಾದಾಗ ಕಡಿಮೆ ಮಾಡಲು ವೈದ್ಯಕೀಯ ತಂಡ ಅನೇಕ ಪ್ರಯತ್ನ ಮಾಡಿತು, ಅವರ ಕೂದಲು ಹಾಗೂ ಉಗುರುಗಳನ್ನು ಕತ್ತರಿಸಲಾಯಿತು. ಆದರೆ ಬೆಳಿಗ್ಗೆ 7 ಗಂಟೆಗೆ ಅವರನ್ನು ತೂಕ ಮಾಡಿದಾಗ, ಅವರು ನಿಗದಿಗಿಂದ 100 ಗ್ರಾಂ ಹೆಚ್ಚು ತೂಕ ಇರುವುದು ಕಂಡುಬಂತು ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

37 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago