ಕ್ರೀಡೆ

ವಿನೇಶ್‌ ಫೋಗಟ್‌ ಅನರ್ಹ: ಐಒಎ ಅಧ್ಯಕ್ಷೆ ಪಿಟಿ ಉಷಾ ಮೊದಲ ಪ್ರತಿಕ್ರಿಯೆ

ಪ್ಯಾರಿಸ್: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಕೇವಲ 100ಗ್ರಾಂ ತೂಕ ಹೆಚ್ಚಿದ್ದ ಕಾರಣಕ್ಕಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ಭಾರತದ ಮೊದಲ ಚಿನ್ನದ ಪದಕದ ನಿರೀಕ್ಷೆ ಕಮರಿದೆ.

ಈ ನಡುವೆ ನಿರ್ಜಲೀಕರಣದಿಂದಾಗಿ ಬಳಲುತ್ತಿರುವ ವಿನೇಶ್‌ ಫೋಗಟ್‌ ಅವರನ್ನು ಕ್ಲಿನಿಕ್‌ಗೆ ದಾಖಲಿಸಲಾಗಿದೆ. ಇದೀಗ ವಿನೇಶ್‌ರನ್ನು ಭೇಟಿಯಾಗಿದ್ದ ಭಾರತೀಯ ಒಲಿಂಪಿಕ್ಸ್‌ ಅಧ್ಯಕ್ಷೆ ಪಿಟಿ ಉಷಾ ಅನರ್ಹದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿನೇಶ್‌ ಫೋಗಟ್‌ ಅವರ ಅನರ್ಹತೆ ಆಘಾತಕಾರಿಯಾಗಿದೆ. ವಿನೇಶ್‌ ಅವರಿಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ, ಭಾರತ ಸರ್ಕಾರ ಹಾಗೂ ಇಡೀ ದೇಶದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದೇವೆ. ಜೊತೆಗೆ ವಿನೇಶ್‌ಗೆ ಎಲ್ಲಾ ರೀತಿಯ ವೈದ್ಯಕೀಯ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇನ್ನೂ ವಿನೇಶ್‌ ಅವರ ಅನರ್ಹತೆ ಬಗ್ಗೆ ಮಾತನಾಡಿದ ಅವರು, ಅನರ್ಹತೆಯ ವಿರುದ್ಧ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ ನಿರಂತರವಾಗಿ ಧ್ವನಿ ಎತ್ತುತ್ತಿದೆ. ಡಬ್ಲ್ಯುಎಫ್‌ಐ ಕೂಡ ಒಲಿಂಪಿಕ್ಸ್‌ ಸಮಿತಿಗೆ ಪತ್ರ ಬರೆದು ವಿನೇಶ್‌ ಅವರ ಅನರ್ಹತೆ ಬಗ್ಗೆ ವಿರೋಧ ವ್ಯಕಪಡಿಸಿದೆ ಎಂದಿದ್ದಾರೆ.

ವಿನೇಶ್‌ ಅವರಿಗೆ ವ್ಯದ್ಯಕೀಯ ತಪಾಸಣೆ ನಡೆಸಲಾಗಿದ್ದು, ಸದ್ಯ ಆಕೆ ಆರೋಗ್ಯವಾಗಿದ್ದಾರೆ. ವಿನೇಶ್‌ ದೈಹಿಕವಾಗಿ ಚೆನ್ನಾಗಿದ್ದಾರೆ ಆದರೆ ಮಾನಸಿಕವಾಗಿ ಅವರು ತುಂಬಾ ಕುಗ್ಗಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನೂ ತೂಕ ಹೆಚ್ಚಳದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಪರ್ದಿವಾಲಾ, ಕೆಲವೊಮ್ಮೆ ನಿರಂತರ ಪಂದ್ಯಗಳಿಂದ ಹೆಚ್ಚು ನೀರು ಕುಡಿಯಬೇಕಾಗುತ್ತದೆ. ಅಂತಹ ಪರಿಸ್ಥಿರಿಯಲ್ಲಿ ತೂಕ ಹೆಚ್ಚಾಗುತ್ತದೆ. ರಾತ್ರಿ ವಿನೇಶ್‌ನ ತೂಕ ಹೆಚ್ಚಾದಾಗ ಕಡಿಮೆ ಮಾಡಲು ವೈದ್ಯಕೀಯ ತಂಡ ಅನೇಕ ಪ್ರಯತ್ನ ಮಾಡಿತು, ಅವರ ಕೂದಲು ಹಾಗೂ ಉಗುರುಗಳನ್ನು ಕತ್ತರಿಸಲಾಯಿತು. ಆದರೆ ಬೆಳಿಗ್ಗೆ 7 ಗಂಟೆಗೆ ಅವರನ್ನು ತೂಕ ಮಾಡಿದಾಗ, ಅವರು ನಿಗದಿಗಿಂದ 100 ಗ್ರಾಂ ಹೆಚ್ಚು ತೂಕ ಇರುವುದು ಕಂಡುಬಂತು ಎಂದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

8 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

16 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago