ಕ್ರೀಡೆ

ವಿನೇಶ್‌ ಫೋಗಟ್‌; ಭಾರತೀಯರ ಮನದಲ್ಲಿ ಚಿನ್ನ ಗೆದ್ದಾಗಿದೆ

ನವದೆಹಲಿ: ಒಲಿಂಪಿಕ್‌ನಲ್ಲಿ ಭಾರತಕ್ಕೆ ಚಿನ್ನದ ಭರವಸೆ ಮೂಡಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹಗೊಂಡಿದ್ದಾರೆ.  ಇದು ದೇಶದ್ಯಾಂತ ಚರ್ಚೆಯಾಗುತ್ತಿದ್ದು,  ವಿನೇಸ್‌ ಫೋಗಟ್  ಅನರ್ಹರಾಗಿದ್ದರೂ ಕೋಟ್ಯಂತರ ಭಾರತೀಯರ ಮನದಲ್ಲಿ ಈಗಾಗಲೇ ಚಿನ್ನ ಗೆದ್ದಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಡೆಯುತ್ತಿದೆ.

ವಿನೇಸ್‌ ಅವರನ್ನು ಅನರ್ಹಗೊಳಿಸಿರುವುದಕ್ಕೆ ಪ್ರಬಲ ಪ್ರತಿಭಟನೆ ಸಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಒಲಿಂಪಿಕ್ ಸಂಸ್ಥೆಗೆ ಒತ್ತಾಯಿಸಿದ್ದಾರೆ.  ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಅಧ್ಯಕ್ಷೆ ಪಿ.ಟಿ.ಉಷಾ ಅವರೊಂದಿಗೆ ಮಾತನಾಡಿರುವ ಮೋದಿ, ಎಲ್ಲಾ ರೀತಿಯಲ್ಲಿ ಸಹಾಯ ಮಾಡಲು ಸಂಪೂರ್ಣ ಶ್ರೇಣಿಯ ಆಯ್ಕೆಗಳನ್ನು ತೆಗದುಕೊಳ್ಳಲು ಹೇಳಿದ್ದಾರೆ.

ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ನಿನ್ನೆ ಮೂರು ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಿದ್ದರು. ಇಂದು ಅಮೆರಿಕದ ಹಿಲ್ಡೆಬ್ರಾಂಡ್ ಸಾರಾ ಆನ್ ರೊಂದಿಗೆ ಅಂತಿಮ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಮುನ್ನ ದೇಹತೂಕ ಹೆಚ್ಚಾದ ಕಾರಣಕ್ಕೆ ಅನರ್ಹಗೊಂಡಿದ್ದಾರೆ. ಇದನ್ನು ಬಲವಾಗಿ ವಿರೋಧಿಸುವಂತೆ ಪ್ರಧಾನಮಂತ್ರಿ ಪಿ.ಟಿ.ಉಷಾ ಅವರಿಗೆ ಸೂಚಿಸಿದ್ದಾರೆ.

ವಿಶ್ವ ಕುಸ್ತಿ ಸಂಸ್ಥೆ ನಿರ್ಧಾರಕ್ಕೆ ತೀವ್ರವಾದ ಆಕ್ಷೇಪವನ್ನು ದಾಖಲಿಸಬೇಕು. ವಿನೇಶ್ ಫೋಗಟ್‍ರವರಿಗೆ ಅಗತ್ಯವಾದ ಕಾನೂನಿನ ನೆರವು ನೀಡಬೇಕೆಂದು ಸೂಚಿಸಿರುವುದಲ್ಲದೆ, ಭಾರತೀಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಾಯ ನೀಡಿ ವಿನೇಶ್ ಫೋಗಟ್ ಪ್ರಕರಣದಲ್ಲಿ ಖುದ್ದಾಗಿ ಕಾಳಜಿ ತೆಗೆದುಕೊಳ್ಳಿ ಎಂದು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

8 mins ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

44 mins ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

2 hours ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

3 hours ago

ಕೇಂದ್ರ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್ ಮಂಡಿಸಿದೆ: ರೈತ ಹಳ್ಳಿಕೆರೆಹುಂಡಿ ಭಾಗ್ಯರಾಜ್

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ…

3 hours ago