ನವದೆಹಲಿ: ಒಲಿಂಪಿಕ್ನಲ್ಲಿ ಭಾರತಕ್ಕೆ ಚಿನ್ನದ ಭರವಸೆ ಮೂಡಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹಗೊಂಡಿದ್ದಾರೆ. ಇದು ದೇಶದ್ಯಾಂತ ಚರ್ಚೆಯಾಗುತ್ತಿದ್ದು, ವಿನೇಸ್ ಫೋಗಟ್ ಅನರ್ಹರಾಗಿದ್ದರೂ ಕೋಟ್ಯಂತರ ಭಾರತೀಯರ ಮನದಲ್ಲಿ ಈಗಾಗಲೇ ಚಿನ್ನ ಗೆದ್ದಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಡೆಯುತ್ತಿದೆ.
ವಿನೇಸ್ ಅವರನ್ನು ಅನರ್ಹಗೊಳಿಸಿರುವುದಕ್ಕೆ ಪ್ರಬಲ ಪ್ರತಿಭಟನೆ ಸಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಒಲಿಂಪಿಕ್ ಸಂಸ್ಥೆಗೆ ಒತ್ತಾಯಿಸಿದ್ದಾರೆ. ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾ ಅವರೊಂದಿಗೆ ಮಾತನಾಡಿರುವ ಮೋದಿ, ಎಲ್ಲಾ ರೀತಿಯಲ್ಲಿ ಸಹಾಯ ಮಾಡಲು ಸಂಪೂರ್ಣ ಶ್ರೇಣಿಯ ಆಯ್ಕೆಗಳನ್ನು ತೆಗದುಕೊಳ್ಳಲು ಹೇಳಿದ್ದಾರೆ.
ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ನಿನ್ನೆ ಮೂರು ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಿದ್ದರು. ಇಂದು ಅಮೆರಿಕದ ಹಿಲ್ಡೆಬ್ರಾಂಡ್ ಸಾರಾ ಆನ್ ರೊಂದಿಗೆ ಅಂತಿಮ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಮುನ್ನ ದೇಹತೂಕ ಹೆಚ್ಚಾದ ಕಾರಣಕ್ಕೆ ಅನರ್ಹಗೊಂಡಿದ್ದಾರೆ. ಇದನ್ನು ಬಲವಾಗಿ ವಿರೋಧಿಸುವಂತೆ ಪ್ರಧಾನಮಂತ್ರಿ ಪಿ.ಟಿ.ಉಷಾ ಅವರಿಗೆ ಸೂಚಿಸಿದ್ದಾರೆ.
ವಿಶ್ವ ಕುಸ್ತಿ ಸಂಸ್ಥೆ ನಿರ್ಧಾರಕ್ಕೆ ತೀವ್ರವಾದ ಆಕ್ಷೇಪವನ್ನು ದಾಖಲಿಸಬೇಕು. ವಿನೇಶ್ ಫೋಗಟ್ರವರಿಗೆ ಅಗತ್ಯವಾದ ಕಾನೂನಿನ ನೆರವು ನೀಡಬೇಕೆಂದು ಸೂಚಿಸಿರುವುದಲ್ಲದೆ, ಭಾರತೀಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಾಯ ನೀಡಿ ವಿನೇಶ್ ಫೋಗಟ್ ಪ್ರಕರಣದಲ್ಲಿ ಖುದ್ದಾಗಿ ಕಾಳಜಿ ತೆಗೆದುಕೊಳ್ಳಿ ಎಂದು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…
ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…
ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…