ಕ್ರೀಡೆ

ವಿನೇಶ್‌ ಫೋಗಟ್‌; ಭಾರತೀಯರ ಮನದಲ್ಲಿ ಚಿನ್ನ ಗೆದ್ದಾಗಿದೆ

ನವದೆಹಲಿ: ಒಲಿಂಪಿಕ್‌ನಲ್ಲಿ ಭಾರತಕ್ಕೆ ಚಿನ್ನದ ಭರವಸೆ ಮೂಡಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹಗೊಂಡಿದ್ದಾರೆ.  ಇದು ದೇಶದ್ಯಾಂತ ಚರ್ಚೆಯಾಗುತ್ತಿದ್ದು,  ವಿನೇಸ್‌ ಫೋಗಟ್  ಅನರ್ಹರಾಗಿದ್ದರೂ ಕೋಟ್ಯಂತರ ಭಾರತೀಯರ ಮನದಲ್ಲಿ ಈಗಾಗಲೇ ಚಿನ್ನ ಗೆದ್ದಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ನಡೆಯುತ್ತಿದೆ.

ವಿನೇಸ್‌ ಅವರನ್ನು ಅನರ್ಹಗೊಳಿಸಿರುವುದಕ್ಕೆ ಪ್ರಬಲ ಪ್ರತಿಭಟನೆ ಸಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಒಲಿಂಪಿಕ್ ಸಂಸ್ಥೆಗೆ ಒತ್ತಾಯಿಸಿದ್ದಾರೆ.  ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಅಧ್ಯಕ್ಷೆ ಪಿ.ಟಿ.ಉಷಾ ಅವರೊಂದಿಗೆ ಮಾತನಾಡಿರುವ ಮೋದಿ, ಎಲ್ಲಾ ರೀತಿಯಲ್ಲಿ ಸಹಾಯ ಮಾಡಲು ಸಂಪೂರ್ಣ ಶ್ರೇಣಿಯ ಆಯ್ಕೆಗಳನ್ನು ತೆಗದುಕೊಳ್ಳಲು ಹೇಳಿದ್ದಾರೆ.

ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ನಿನ್ನೆ ಮೂರು ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಿದ್ದರು. ಇಂದು ಅಮೆರಿಕದ ಹಿಲ್ಡೆಬ್ರಾಂಡ್ ಸಾರಾ ಆನ್ ರೊಂದಿಗೆ ಅಂತಿಮ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಮುನ್ನ ದೇಹತೂಕ ಹೆಚ್ಚಾದ ಕಾರಣಕ್ಕೆ ಅನರ್ಹಗೊಂಡಿದ್ದಾರೆ. ಇದನ್ನು ಬಲವಾಗಿ ವಿರೋಧಿಸುವಂತೆ ಪ್ರಧಾನಮಂತ್ರಿ ಪಿ.ಟಿ.ಉಷಾ ಅವರಿಗೆ ಸೂಚಿಸಿದ್ದಾರೆ.

ವಿಶ್ವ ಕುಸ್ತಿ ಸಂಸ್ಥೆ ನಿರ್ಧಾರಕ್ಕೆ ತೀವ್ರವಾದ ಆಕ್ಷೇಪವನ್ನು ದಾಖಲಿಸಬೇಕು. ವಿನೇಶ್ ಫೋಗಟ್‍ರವರಿಗೆ ಅಗತ್ಯವಾದ ಕಾನೂನಿನ ನೆರವು ನೀಡಬೇಕೆಂದು ಸೂಚಿಸಿರುವುದಲ್ಲದೆ, ಭಾರತೀಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಾಯ ನೀಡಿ ವಿನೇಶ್ ಫೋಗಟ್ ಪ್ರಕರಣದಲ್ಲಿ ಖುದ್ದಾಗಿ ಕಾಳಜಿ ತೆಗೆದುಕೊಳ್ಳಿ ಎಂದು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

11 hours ago