ಕ್ರೀಡೆ

ಪಾದಚಾರಿ ಮಾರ್ಗದಲ್ಲಿ ಖೇಲ್ ರತ್ನ ಪ್ರಶಸ್ತಿ ತೊರೆದ ವಿನೇಶ್ ಫೋಗಟ್!

ನವದೆಹಲಿ: ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ವಿವಾದದ ನಡುವೆ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಶನಿವಾರ ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ತೊರೆದು ಹೋಗಿದ್ದಾರೆ.

ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ತನ್ನ ಪ್ರಶಸ್ತಿಗಳನ್ನು ಪ್ರಧಾನ ಮಂತ್ರಿ ಕಚೇರಿಯ ಹೊರಗೆ ಬಿಡಲು ಪ್ರಯತ್ನಿಸಿದರು. ಆದರೆ, ಆಕೆಯನ್ನು ಕರ್ತವ್ಯ ಪಥದಲ್ಲಿ ಪೊಲೀಸರು ತಡೆದರು. ಇದರಿಂದಾಗಿ ಫೋಗಟ್ ತನ್ನ ಪ್ರಶಸ್ತಿಗಳನ್ನು ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದರು. 2020 ರಲ್ಲಿ ಖೇಲ್ ರತ್ನ ಮತ್ತು 2016 ರಲ್ಲಿ ಅರ್ಜುನ ಪ್ರಶಸ್ತಿ ಪಡೆದಿದ್ದರು.

ನ್ಯಾಯಕ್ಕಾಗಿ ಹರಸಾಹಸ ಪಡುತ್ತಿರುವ ಪ್ರಸ್ತುತ ಪರಿಸ್ಥಿತಿಯಲ್ಲಿ ಇಂತಹ ಗೌರವಗಳು ಅರ್ಥಹೀನವಾಗಿವೆ ಎಂದು ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದು ತಮಗೆ ಬಂದಿರುವ ಅರ್ಜುನ ಮತ್ತು ಖೇಲ್‌ ರತ್ನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಹೇಳಿದ್ದರು.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ದಲ್ಲಿ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ವಿರುದ್ಧ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಡೆಫಿಲಂಪಿಕ್ಸ್ ಚಾಂಪಿಯನ್ ವೀರೇಂದ್ರ ಸಿಂಗ್ ಯಾದವ್ ಪದ್ಮಶ್ರೀ ಪ್ರಶಸ್ತಿಗಳನ್ನು ಹಿಂದಿರುಗಿಸಿದ ಕೆಲವು ದಿನಗಳ ನಂತರ ಫೋಗಟ್ ಇಂದು ಮೆಡಲ್‌ ಕೈಬಿಡುವ ನಿರ್ಧಾರ ಕೈಗೊಂಡಿದ್ದಾರೆ.

ಸಂಜಯ್ ಸಿಂಗ್ ಕಳೆದ ವಾರ ಡಬ್ಲ್ಯುಎಫ್‌ಐ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಅವರು ಬ್ರಿಜ್ ಭೂಷಣ್ ಸಿಂಗ್ ಶರಣ್ ಅವರ ಸಹವರ್ತಿಯಾಗಿದ್ದರಿಂದ ಕುಸ್ತಿಪಟುಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಬ್ರಿಜ್ ಭೂಷಣ್ ಮೇಲೆ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರು ಹಲವಾರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಪ್ರಕರಣ ಸದ್ಯ ದೆಹಲಿ ನ್ಯಾಯಾಲಯದಲ್ಲಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago