ಮುಂಬೈ : ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಕೋಟ್ಯಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಅಭಿಮಾನಿಗಳು ಒಮ್ಮೆಯಾದ್ರೂ ಮಹಿಯನ್ನ ಹತ್ತಿರದಿಂದ ನೋಡ್ಬೇಕು ಅಂತಾ ಆಸೆ ಪಡ್ತಾರೆ. ಅಂತಹ ಒಂದು ಕ್ಷಣ ಸಿಕ್ಕರೂ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲಾರದೇ ಇರೋದಿಲ್ಲ. 2023 IPL ಟೂರ್ನಿಯಲ್ಲಿ ಮಹಿ ನೋಡಲೆಂದೇ ಸಾವಿರಾರು ಕಿಲೋ ಮೀಟರ್ಗಳಿಂದ ಅಭಿಮಾನಿಗಳು ಬಂದಿದ್ರು. ಇದೀಗ ಗಗನಸಖಿಯೊಬ್ಬಳು ಅಂತಹದ್ದೇ ಕ್ಷಣವನ್ನ ಫೋಟೋದಲ್ಲಿ ಸೆರೆಹಿಡಿಯಲು ಹೋಗಿ ಸುದ್ದಿಯಾಗಿದ್ದಾಳೆ.
ಇತ್ತೀಚೆಗೆ ವಿಮಾನ ಪ್ರಯಾಣ ಸಮಯದಲ್ಲಿ ಎಂ.ಎಸ್.ಧೋನಿ ಪಕ್ಕದಲ್ಲಿ ನಿಂತು ಗಗನ ಸಖಿಯೊಬ್ಬಳು ಫೋಟೋ ತೆಗೆದುಕೊಂಡಿದ್ದಾಳೆ. ಆದ್ರೆ ಈ ಫೋಟೋ ತೆಗೆದುಕೊಳ್ಳುವಾಗ ಧೋನಿ ಸಣ್ಣ ನಿದ್ರೆಗೆ ಜಾರಿದ್ದರು. ಹಾಗಾಗಿ ಇದು ಅವರಿಗೆ ಗೊತ್ತೇ ಇರಲಿಲ್ಲ. ಈ ಫೋಟೋ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಗಗನಸಖಿ ವಿರುದ್ಧ ಕಿಡಿ ಕಾರಿದ್ದಾರೆ.
ಒಬ್ಬ ಅಭಿಮಾನಿಯಾಗಿ ನಾನು ಸಹ ಅವರನ್ನ ನೋಡಲು ಬಯಸುತ್ತೇನೆ. ಆದ್ರೆ ಅವರ ಅನುಮತಿಯಿಲ್ಲದೇ ಅವರ ಪರ್ಸನಲ್ ಸ್ಪೇಸ್ಗೆ ಅಡ್ಡಿಪಡಿಸಲು ಬಯಸುವುದಿಲ್ಲ. ಇನ್ಮುಂದೆ ಹೀಗೆ ಮಾಡ್ಬೇಡಿ ಅಂತಾ ಅಭಿಮಾನಿಯೊಬ್ಬರು ಕೇಳಿಕೊಂಡಿದ್ದಾರೆ. ಮತ್ತೊಬ್ಬರು, ಯಾರಾದರೂ ಗಗನಸಖಿಯರಿಗೆ ಹೆಚ್ಚು ವೃತ್ತಿಪರರಾಗಿರಲು ಮತ್ತು ಅವರ ಗೌಪ್ಯತೆಗೆ ಅನುಗುಣವಾಗಿ ನಡೆದುಕೊಳ್ಳುವಂತೆ ಸೂಚಿಸಬಹುದೇ ಅಂತಾ ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ಧೋನಿ ಜಾಗದಲ್ಲಿ ಯುವತಿ, ಗಗನಸಖಿ ಜಾಗದಲ್ಲಿ ಧೋನಿ ಇದ್ದರೆ ಇಷ್ಟು ಹೊತ್ತಿಗೆ ಮಹಿಳಾ ಹೋರಾಟಗಾರರು ಕಟು ಪದಗಳಲ್ಲಿ ಟೀಕೆ ಮಾಡುತ್ತಿದ್ದರು ಎಂದು ಪ್ರತಿಕ್ರಿಯಿಸಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 5 ಬಾರಿ ಚಾಂಪಿಯನ್ ಟ್ರೋಫಿ ಎತ್ತಿ ಹಿಡಿದಿರುವ ಮಹಿ ಮುಂದಿನ ಋತುವಿನಲ್ಲೂ ಕಾಣಿಸಿಕೊಳ್ಳುವುದಾಗಿ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ಸಂತಗೊಂಡಿದ್ದಾರೆ. ಇತ್ತೀಚೆಗೆ ತಮ್ಮದೇ ನಿರ್ಮಾಣ ಧೋನಿ ಎಂಟರ್ಟೈನ್ಮೆಂಟ್ ಪ್ರೈವೇಟ್ ಸಂಸ್ಥೆ ಪ್ರಾರಂಭಿಸುವ ಮೂಲಕ ಮನರಂಜನಾ ಜಗತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ.
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…
ನವದೆಹಲಿ: ಕರ್ನಾಟಕ ಹಾಗೂ ಬಿಹಾರ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಏಳು ಸ್ಥಾನಗಳಿಗೆ ದ್ವೈವಾರ್ಷಿಕ…
ಮಂಡ್ಯ: ವಿಜಯ್ ರೀತಿ ತಮಿಳುನಾಡಿನಲ್ಲಿ ನೂರು ಮಂದಿ ಮುಖ್ಯಮಂತ್ರಿಯಾದರೂ ಸಹ ನಾವು ಮೇಕೆದಾಟು ಡ್ಯಾಂ ಕಟ್ಟೋದನ್ನು ತಡೆಯಲು ಸಾಧ್ಯವಿಲ್ಲ ಎಂದು…
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…