ಕ್ರೀಡೆ

ವೈರಲ್‌ ಸುದ್ದಿ: ಧೋನಿ ವಿಮಾನದಲ್ಲಿ ಮಲಗಿದ್ದಾಗ ಫೋಟೋ ಕ್ಲಿಕ್ಕಿಸಿದ ಗಗನಸಖಿ

ಮುಂಬೈ : ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಕೋಟ್ಯಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಅಭಿಮಾನಿಗಳು ಒಮ್ಮೆಯಾದ್ರೂ ಮಹಿಯನ್ನ ಹತ್ತಿರದಿಂದ ನೋಡ್ಬೇಕು ಅಂತಾ ಆಸೆ ಪಡ್ತಾರೆ. ಅಂತಹ ಒಂದು ಕ್ಷಣ ಸಿಕ್ಕರೂ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲಾರದೇ ಇರೋದಿಲ್ಲ. 2023 IPL ಟೂರ್ನಿಯಲ್ಲಿ ಮಹಿ ನೋಡಲೆಂದೇ ಸಾವಿರಾರು ಕಿಲೋ ಮೀಟರ್‌ಗಳಿಂದ ಅಭಿಮಾನಿಗಳು ಬಂದಿದ್ರು. ಇದೀಗ ಗಗನಸಖಿಯೊಬ್ಬಳು ಅಂತಹದ್ದೇ ಕ್ಷಣವನ್ನ ಫೋಟೋದಲ್ಲಿ ಸೆರೆಹಿಡಿಯಲು ಹೋಗಿ ಸುದ್ದಿಯಾಗಿದ್ದಾಳೆ.

ಇತ್ತೀಚೆಗೆ ವಿಮಾನ ಪ್ರಯಾಣ ಸಮಯದಲ್ಲಿ ಎಂ.ಎಸ್‌.ಧೋನಿ ಪಕ್ಕದಲ್ಲಿ ನಿಂತು ಗಗನ ಸಖಿಯೊಬ್ಬಳು ಫೋಟೋ ತೆಗೆದುಕೊಂಡಿದ್ದಾಳೆ. ಆದ್ರೆ ಈ ಫೋಟೋ ತೆಗೆದುಕೊಳ್ಳುವಾಗ ಧೋನಿ ಸಣ್ಣ ನಿದ್ರೆಗೆ ಜಾರಿದ್ದರು. ಹಾಗಾಗಿ ಇದು ಅವರಿಗೆ ಗೊತ್ತೇ ಇರಲಿಲ್ಲ. ಈ ಫೋಟೋ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಗಗನಸಖಿ ವಿರುದ್ಧ ಕಿಡಿ ಕಾರಿದ್ದಾರೆ.

ಒಬ್ಬ ಅಭಿಮಾನಿಯಾಗಿ ನಾನು ಸಹ ಅವರನ್ನ ನೋಡಲು ಬಯಸುತ್ತೇನೆ. ಆದ್ರೆ ಅವರ ಅನುಮತಿಯಿಲ್ಲದೇ ಅವರ ಪರ್ಸನಲ್ ಸ್ಪೇಸ್‌ಗೆ ಅಡ್ಡಿಪಡಿಸಲು ಬಯಸುವುದಿಲ್ಲ. ಇನ್ಮುಂದೆ ಹೀಗೆ ಮಾಡ್ಬೇಡಿ ಅಂತಾ ಅಭಿಮಾನಿಯೊಬ್ಬರು ಕೇಳಿಕೊಂಡಿದ್ದಾರೆ. ಮತ್ತೊಬ್ಬರು, ಯಾರಾದರೂ ಗಗನಸಖಿಯರಿಗೆ ಹೆಚ್ಚು ವೃತ್ತಿಪರರಾಗಿರಲು ಮತ್ತು ಅವರ ಗೌಪ್ಯತೆಗೆ ಅನುಗುಣವಾಗಿ ನಡೆದುಕೊಳ್ಳುವಂತೆ ಸೂಚಿಸಬಹುದೇ ಅಂತಾ ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ಧೋನಿ ಜಾಗದಲ್ಲಿ ಯುವತಿ, ಗಗನಸಖಿ ಜಾಗದಲ್ಲಿ ಧೋನಿ ಇದ್ದರೆ ಇಷ್ಟು ಹೊತ್ತಿಗೆ ಮಹಿಳಾ ಹೋರಾಟಗಾರರು ಕಟು ಪದಗಳಲ್ಲಿ ಟೀಕೆ ಮಾಡುತ್ತಿದ್ದರು ಎಂದು ಪ್ರತಿಕ್ರಿಯಿಸಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 5 ಬಾರಿ ಚಾಂಪಿಯನ್ ಟ್ರೋಫಿ ಎತ್ತಿ ಹಿಡಿದಿರುವ ಮಹಿ ಮುಂದಿನ ಋತುವಿನಲ್ಲೂ ಕಾಣಿಸಿಕೊಳ್ಳುವುದಾಗಿ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ಸಂತಗೊಂಡಿದ್ದಾರೆ. ಇತ್ತೀಚೆಗೆ ತಮ್ಮದೇ ನಿರ್ಮಾಣ ಧೋನಿ ಎಂಟರ್ಟೈನ್ಮೆಂಟ್‌ ಪ್ರೈವೇಟ್ ಸಂಸ್ಥೆ ಪ್ರಾರಂಭಿಸುವ ಮೂಲಕ ಮನರಂಜನಾ ಜಗತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ.

andolanait

Recent Posts

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

32 mins ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

60 mins ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

1 hour ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

2 hours ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

2 hours ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

3 hours ago