ಕ್ರೀಡೆ

ವೈರಲ್‌ ಸುದ್ದಿ: ಧೋನಿ ವಿಮಾನದಲ್ಲಿ ಮಲಗಿದ್ದಾಗ ಫೋಟೋ ಕ್ಲಿಕ್ಕಿಸಿದ ಗಗನಸಖಿ

ಮುಂಬೈ : ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಕೋಟ್ಯಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಅಭಿಮಾನಿಗಳು ಒಮ್ಮೆಯಾದ್ರೂ ಮಹಿಯನ್ನ ಹತ್ತಿರದಿಂದ ನೋಡ್ಬೇಕು ಅಂತಾ ಆಸೆ ಪಡ್ತಾರೆ. ಅಂತಹ ಒಂದು ಕ್ಷಣ ಸಿಕ್ಕರೂ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲಾರದೇ ಇರೋದಿಲ್ಲ. 2023 IPL ಟೂರ್ನಿಯಲ್ಲಿ ಮಹಿ ನೋಡಲೆಂದೇ ಸಾವಿರಾರು ಕಿಲೋ ಮೀಟರ್‌ಗಳಿಂದ ಅಭಿಮಾನಿಗಳು ಬಂದಿದ್ರು. ಇದೀಗ ಗಗನಸಖಿಯೊಬ್ಬಳು ಅಂತಹದ್ದೇ ಕ್ಷಣವನ್ನ ಫೋಟೋದಲ್ಲಿ ಸೆರೆಹಿಡಿಯಲು ಹೋಗಿ ಸುದ್ದಿಯಾಗಿದ್ದಾಳೆ.

ಇತ್ತೀಚೆಗೆ ವಿಮಾನ ಪ್ರಯಾಣ ಸಮಯದಲ್ಲಿ ಎಂ.ಎಸ್‌.ಧೋನಿ ಪಕ್ಕದಲ್ಲಿ ನಿಂತು ಗಗನ ಸಖಿಯೊಬ್ಬಳು ಫೋಟೋ ತೆಗೆದುಕೊಂಡಿದ್ದಾಳೆ. ಆದ್ರೆ ಈ ಫೋಟೋ ತೆಗೆದುಕೊಳ್ಳುವಾಗ ಧೋನಿ ಸಣ್ಣ ನಿದ್ರೆಗೆ ಜಾರಿದ್ದರು. ಹಾಗಾಗಿ ಇದು ಅವರಿಗೆ ಗೊತ್ತೇ ಇರಲಿಲ್ಲ. ಈ ಫೋಟೋ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಗಗನಸಖಿ ವಿರುದ್ಧ ಕಿಡಿ ಕಾರಿದ್ದಾರೆ.

ಒಬ್ಬ ಅಭಿಮಾನಿಯಾಗಿ ನಾನು ಸಹ ಅವರನ್ನ ನೋಡಲು ಬಯಸುತ್ತೇನೆ. ಆದ್ರೆ ಅವರ ಅನುಮತಿಯಿಲ್ಲದೇ ಅವರ ಪರ್ಸನಲ್ ಸ್ಪೇಸ್‌ಗೆ ಅಡ್ಡಿಪಡಿಸಲು ಬಯಸುವುದಿಲ್ಲ. ಇನ್ಮುಂದೆ ಹೀಗೆ ಮಾಡ್ಬೇಡಿ ಅಂತಾ ಅಭಿಮಾನಿಯೊಬ್ಬರು ಕೇಳಿಕೊಂಡಿದ್ದಾರೆ. ಮತ್ತೊಬ್ಬರು, ಯಾರಾದರೂ ಗಗನಸಖಿಯರಿಗೆ ಹೆಚ್ಚು ವೃತ್ತಿಪರರಾಗಿರಲು ಮತ್ತು ಅವರ ಗೌಪ್ಯತೆಗೆ ಅನುಗುಣವಾಗಿ ನಡೆದುಕೊಳ್ಳುವಂತೆ ಸೂಚಿಸಬಹುದೇ ಅಂತಾ ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ಧೋನಿ ಜಾಗದಲ್ಲಿ ಯುವತಿ, ಗಗನಸಖಿ ಜಾಗದಲ್ಲಿ ಧೋನಿ ಇದ್ದರೆ ಇಷ್ಟು ಹೊತ್ತಿಗೆ ಮಹಿಳಾ ಹೋರಾಟಗಾರರು ಕಟು ಪದಗಳಲ್ಲಿ ಟೀಕೆ ಮಾಡುತ್ತಿದ್ದರು ಎಂದು ಪ್ರತಿಕ್ರಿಯಿಸಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 5 ಬಾರಿ ಚಾಂಪಿಯನ್ ಟ್ರೋಫಿ ಎತ್ತಿ ಹಿಡಿದಿರುವ ಮಹಿ ಮುಂದಿನ ಋತುವಿನಲ್ಲೂ ಕಾಣಿಸಿಕೊಳ್ಳುವುದಾಗಿ ಹೇಳಿದ್ದಾರೆ. ಇದರಿಂದ ಅಭಿಮಾನಿಗಳು ಸಂತಗೊಂಡಿದ್ದಾರೆ. ಇತ್ತೀಚೆಗೆ ತಮ್ಮದೇ ನಿರ್ಮಾಣ ಧೋನಿ ಎಂಟರ್ಟೈನ್ಮೆಂಟ್‌ ಪ್ರೈವೇಟ್ ಸಂಸ್ಥೆ ಪ್ರಾರಂಭಿಸುವ ಮೂಲಕ ಮನರಂಜನಾ ಜಗತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

23 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

23 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

23 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

23 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

23 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

23 hours ago