ಕ್ರೀಡೆ

ತಮ್ಮ ತೋಟದ ಮನೆಯಲ್ಲಿ ಕ್ರಿಕೆಟ್‌ ಪಿಚ್‌ ನಿರ್ಮಾಣ ಕುರಿತ ನಕಲಿ ಸುದ್ದಿಗೆ ವಿರಾಟ್‌ ಕೊಹ್ಲಿ ಆಕ್ರೋಶ

ಮುಂಬೈ: ತಮ್ಮ ದುಬಾರಿ ಆಲಿಬಾಗ್ ತೋಟದ ಮನೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮ ಕ್ರಿಕೆಟ್ ಪಿಚ್ ಒಂದನ್ನು ನಿರ್ಮಿಸುವ ಉದ್ದೇಶ ಹೊಂದಿದ್ದಾರೆ ಎಂಬ ಪ್ರಮುಖ ಸುದ್ದಿ ಸಂಸ್ಥೆಯ ವರದಿಯನ್ನು ಸಾಮಾಜಿಕ ಮಾಧ್ಯಮ ಟಿಪ್ಪಣಿಯೊಂದರ ಮೂಲಕ ವಿರಾಟ್ ಕೊಹ್ಲಿ ಅಲ್ಲಗಳೆದಿದ್ದಾರೆ.

ಮಂಗಳವಾರ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿರುವ ವಿರಾಟ್ ಕೊಹ್ಲಿ, ಈ ಕುರಿತ ಊಹಾಪೋಹಗಳನ್ನು ನಿವಾರಿಸಿದ್ದು, ಅಂತಹ ಯಾವುದೇ ಬೆಳವಣಿಗೆಯನ್ನು ನಕಲಿ ಸುದ್ದಿ ಎಂದು ಪ್ರತಿಪಾದಿಸಿದ್ದಾರೆ. “ಬಚ್ಪನ್ ಸೆ ಜೋ ಅಖ್ಬಾರ್ ಪಢಾ ಹೈ, ವೋ ಭಿ ಫೇಕ್ ನ್ಯೂಸ್ ಚಾಪ್ನೆ ಲಗೆ ಅಬ್ (ಬಾಲ್ಯದಿಂದ ನಾನು ಯಾವ ಪತ್ರಿಕೆಯನ್ನು ಓದುತ್ತಾ ಬರುತ್ತಿದ್ದೇನೆಯೋ, ಆ ಪತ್ರಿಕೆಯೂ ಈಗ ನಕಲಿ ಸುದ್ದಿಯನ್ನು ಮುದ್ರಿಸಲು ಶುರು ಮಾಡಿತು) ಎಂದು ತಮ್ಮ ಇನ್ಸ್ಟಾಗ್ರಾಮ್ ಸ್ಟೋರೀಸ್ ನಲ್ಲಿ ಉಲ್ಲೇಖಿಸಿದ್ದಾರೆ.

ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಐಷಾರಾಮಿ ತೋಟದ ಮನೆಯಲ್ಲಿ ಕ್ರಿಕೆಟ್ ಪಿಚ್ ಒಂದನ್ನು ನಿರ್ಮಿಸುವ ಆಸಕ್ತಿ ಹೊಂದಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದ ನಂತರ ಕೊಹ್ಲಿಯ ಈ ಪ್ರತಿಕ್ರಿಯೆ ಹೊರಬಿದ್ದಿದೆ. ಇನ್ಸ್ಟಾಗ್ರಾಮ್ ನಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಕ್ರೀಡಾಪಟುಗಳ ಪೈಕಿ ಒಬ್ಬರಾಗಿರುವ ವಿರಾಟ್ ಕೊಹ್ಲಿ, ಫೋಟೊ ಮತ್ತು ವಿಡಿಯೊ ಹಂಚಿಕೆ ವೇದಿಕೆಯಾದ ಇನ್ಸ್ಟಾಗ್ರಾಮ್ ನಲ್ಲಿ 225 ದಶಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ.

andolanait

Recent Posts

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

28 mins ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

52 mins ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

60 mins ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

1 hour ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

2 hours ago

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…

2 hours ago