ಕ್ರೀಡೆ

ತಮ್ಮ ತೋಟದ ಮನೆಯಲ್ಲಿ ಕ್ರಿಕೆಟ್‌ ಪಿಚ್‌ ನಿರ್ಮಾಣ ಕುರಿತ ನಕಲಿ ಸುದ್ದಿಗೆ ವಿರಾಟ್‌ ಕೊಹ್ಲಿ ಆಕ್ರೋಶ

ಮುಂಬೈ: ತಮ್ಮ ದುಬಾರಿ ಆಲಿಬಾಗ್ ತೋಟದ ಮನೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮ ಕ್ರಿಕೆಟ್ ಪಿಚ್ ಒಂದನ್ನು ನಿರ್ಮಿಸುವ ಉದ್ದೇಶ ಹೊಂದಿದ್ದಾರೆ ಎಂಬ ಪ್ರಮುಖ ಸುದ್ದಿ ಸಂಸ್ಥೆಯ ವರದಿಯನ್ನು ಸಾಮಾಜಿಕ ಮಾಧ್ಯಮ ಟಿಪ್ಪಣಿಯೊಂದರ ಮೂಲಕ ವಿರಾಟ್ ಕೊಹ್ಲಿ ಅಲ್ಲಗಳೆದಿದ್ದಾರೆ.

ಮಂಗಳವಾರ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿರುವ ವಿರಾಟ್ ಕೊಹ್ಲಿ, ಈ ಕುರಿತ ಊಹಾಪೋಹಗಳನ್ನು ನಿವಾರಿಸಿದ್ದು, ಅಂತಹ ಯಾವುದೇ ಬೆಳವಣಿಗೆಯನ್ನು ನಕಲಿ ಸುದ್ದಿ ಎಂದು ಪ್ರತಿಪಾದಿಸಿದ್ದಾರೆ. “ಬಚ್ಪನ್ ಸೆ ಜೋ ಅಖ್ಬಾರ್ ಪಢಾ ಹೈ, ವೋ ಭಿ ಫೇಕ್ ನ್ಯೂಸ್ ಚಾಪ್ನೆ ಲಗೆ ಅಬ್ (ಬಾಲ್ಯದಿಂದ ನಾನು ಯಾವ ಪತ್ರಿಕೆಯನ್ನು ಓದುತ್ತಾ ಬರುತ್ತಿದ್ದೇನೆಯೋ, ಆ ಪತ್ರಿಕೆಯೂ ಈಗ ನಕಲಿ ಸುದ್ದಿಯನ್ನು ಮುದ್ರಿಸಲು ಶುರು ಮಾಡಿತು) ಎಂದು ತಮ್ಮ ಇನ್ಸ್ಟಾಗ್ರಾಮ್ ಸ್ಟೋರೀಸ್ ನಲ್ಲಿ ಉಲ್ಲೇಖಿಸಿದ್ದಾರೆ.

ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಐಷಾರಾಮಿ ತೋಟದ ಮನೆಯಲ್ಲಿ ಕ್ರಿಕೆಟ್ ಪಿಚ್ ಒಂದನ್ನು ನಿರ್ಮಿಸುವ ಆಸಕ್ತಿ ಹೊಂದಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದ ನಂತರ ಕೊಹ್ಲಿಯ ಈ ಪ್ರತಿಕ್ರಿಯೆ ಹೊರಬಿದ್ದಿದೆ. ಇನ್ಸ್ಟಾಗ್ರಾಮ್ ನಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಕ್ರೀಡಾಪಟುಗಳ ಪೈಕಿ ಒಬ್ಬರಾಗಿರುವ ವಿರಾಟ್ ಕೊಹ್ಲಿ, ಫೋಟೊ ಮತ್ತು ವಿಡಿಯೊ ಹಂಚಿಕೆ ವೇದಿಕೆಯಾದ ಇನ್ಸ್ಟಾಗ್ರಾಮ್ ನಲ್ಲಿ 225 ದಶಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ.

andolanait

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

8 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

8 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

10 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

11 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

12 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

12 hours ago