ಮುಂಬೈ: ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬಳಿಕ ಇದೀಗ ಕ್ರಿಕೆಟ್ ಲೋಕದ ಕಿಂಗ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಘೋಷಣೆ ಮಾಡಿದ್ದಾರೆ.
14 ವರ್ಷಗಳ ವೃತ್ತಿ ಜೀವನದ ನಂತರ ವಿರಾಟ್ ಕೊಹ್ಲಿ ಅವರು ಈ ಸ್ವರೂಪಕ್ಕೆ ವಿದಾಯ ಹೇಳಿದ್ದು, ತಮ್ಮ ಅನುಭವಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ನಾನು ಮೊದಲ ಬಾರಿಗೆ ಗುಡ್ಡೆಯ ನೀಲಿ ಜರ್ಸಿ ಧರಿಸಿ 14 ವರ್ಷಗಳಾಗಿವೆ. ನಿಜವಾಗಿಯೂ ಈ ಸ್ವರೂಪವು ನನ್ನನ್ನು ಎಲ್ಲಿ ಕೊಂಡೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ರೂಪಿಸಿದೆ ಮತ್ತು ಜೀವನಪೂರ್ತಿ ನೆನಪಿನಲ್ಲಿರುವ ಪಾಠಗಳನ್ನು ಕಲಿಸಿದೆ.
ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಏನೋ ಆತ್ಮೀಯವಾದದ್ದು ಇದೆ. ಸದ್ದಿಲ್ಲದ ಕಠಿಣ ಶ್ರಮ, ದೀರ್ಘ ದಿನಗಳು, ಯಾರಿಗೂ ಕಾಣದ ಆದರೆ ಶಾಶ್ವತವಾಗಿ ನಿಮ್ಮೊಂದಿಗಿರುವ ಸಣ್ಣ ಕ್ಷಣಗಳು.
ನಾನು ಯಾವಾಗಲೂ ನನ್ನ ಟೆಸ್ಟ್ ವೃತ್ತಿಜೀವನವನ್ನು ಮಂದಹಾಸದೊಂದಿಗೆ ನೆನಪಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…