ಕ್ರೀಡೆ

ಸಚಿನ್‌ ತೆಂಡಲ್ಕೂರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

ಹೊಸದಿಲ್ಲಿ : ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅವರು, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಐಸಿಸಿಯ ಒಂದು ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಗೆ ಕೊಹ್ಲಿ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ 51 ಶತಕ ಹೊಡೆದಿದ್ದರು. ಕೊಹ್ಲಿ ಇಂದು 102 ಎಸೆತಗಳಲ್ಲಿ 52ನೇ ಶತಕ ಸಿಡಿಸಿ ಸಚಿನ್ ದಾಖಲೆಯನ್ನು ಮುರಿದಿದ್ದಾರೆ.

ಇದನ್ನು ಓದಿ:  ಅಂಧರ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಗೆದ್ದ ಭಾರತ

ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರು ಇವರು.

1.ವಿರಾಟ್ ಕೊಹ್ಲಿ(ಏಕದಿನ) – 52
2.ಸಚಿನ್ ತೆಂಡೂಲ್ಕರ್(ಟೆಸ್ಟ್)- 51
3.ಸಚಿನ್ ತೆಂಡೂಲ್ಕರ್ (ಏಕದಿನ) – 49
4. ಜಾಕ್ವೆಸ್ ಕಾಲಿಸ್ (ಟೆಸ್ಟ್)-45
5.ರಿಕಿ ಪಾಂಟಿಂಗ್ (ಟೆಸ್ಟ್) – 41

ವಿರಾಟ್ ಕೊಹ್ಲಿ 48 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರೆ 102 ಎಸೆತಗಳಲ್ಲಿ ಶತಕ ಹೊಡೆದರು. ಅಂತಿಮವಾಗಿ ಕೊಹ್ಲಿ 130 ರನ್(11 ಬೌಂಡರಿ, 7 ಸಿಕ್ಸ್) ಹೊಡೆದು ಔಟಾದರು.

ಎರಡನೇ ವಿಕೆಟ್‌ಗೆ ರೋಹಿತ್ ಶರ್ಮಾ ಮತ್ತು ಕೊಹ್ಲಿ 109 ಎಸೆತಗಳಿಗೆ 136 ರನ್ ಜೊತೆಯಾಟವಾಡಿದ್ದರೆ ನಾಲ್ಕನೇ ವಿಕೆಟಿಗೆ ಕೆಎಲ್ ರಾಹುಲ್ ಜೊತೆ 74 ಎಸೆತಗಳಲ್ಲಿ 76 ರನ್ ಜೊತೆಯಾಟವಾಡಿದರು. ಭಾರತದ ಮೊತ್ತ 25 ಆಗಿದ್ದಾಗ ಕ್ರೀಸ್‌ಗೆ ಆಗಮಿಸಿದ ಕೊಹ್ಲಿ ತಂಡದ ಸ್ಕೋರ್ 276 ಆಗಿದ್ದಾಗ ಕ್ಯಾಚ್ ನೀಡಿ ಔಟಾದರು.

ಆಂದೋಲನ ಡೆಸ್ಕ್

Recent Posts

ಪ್ರವಾಸಿಗರ ಆಕರ್ಷಣೆಯ ಭದ್ರದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

5 mins ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

18 mins ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

4 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

4 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

4 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

4 hours ago