ಕ್ರೀಡೆ

ಸಚಿನ್‌ ತೆಂಡಲ್ಕೂರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

ಹೊಸದಿಲ್ಲಿ : ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅವರು, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಐಸಿಸಿಯ ಒಂದು ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಗೆ ಕೊಹ್ಲಿ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ 51 ಶತಕ ಹೊಡೆದಿದ್ದರು. ಕೊಹ್ಲಿ ಇಂದು 102 ಎಸೆತಗಳಲ್ಲಿ 52ನೇ ಶತಕ ಸಿಡಿಸಿ ಸಚಿನ್ ದಾಖಲೆಯನ್ನು ಮುರಿದಿದ್ದಾರೆ.

ಇದನ್ನು ಓದಿ:  ಅಂಧರ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಗೆದ್ದ ಭಾರತ

ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರು ಇವರು.

1.ವಿರಾಟ್ ಕೊಹ್ಲಿ(ಏಕದಿನ) – 52
2.ಸಚಿನ್ ತೆಂಡೂಲ್ಕರ್(ಟೆಸ್ಟ್)- 51
3.ಸಚಿನ್ ತೆಂಡೂಲ್ಕರ್ (ಏಕದಿನ) – 49
4. ಜಾಕ್ವೆಸ್ ಕಾಲಿಸ್ (ಟೆಸ್ಟ್)-45
5.ರಿಕಿ ಪಾಂಟಿಂಗ್ (ಟೆಸ್ಟ್) – 41

ವಿರಾಟ್ ಕೊಹ್ಲಿ 48 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರೆ 102 ಎಸೆತಗಳಲ್ಲಿ ಶತಕ ಹೊಡೆದರು. ಅಂತಿಮವಾಗಿ ಕೊಹ್ಲಿ 130 ರನ್(11 ಬೌಂಡರಿ, 7 ಸಿಕ್ಸ್) ಹೊಡೆದು ಔಟಾದರು.

ಎರಡನೇ ವಿಕೆಟ್‌ಗೆ ರೋಹಿತ್ ಶರ್ಮಾ ಮತ್ತು ಕೊಹ್ಲಿ 109 ಎಸೆತಗಳಿಗೆ 136 ರನ್ ಜೊತೆಯಾಟವಾಡಿದ್ದರೆ ನಾಲ್ಕನೇ ವಿಕೆಟಿಗೆ ಕೆಎಲ್ ರಾಹುಲ್ ಜೊತೆ 74 ಎಸೆತಗಳಲ್ಲಿ 76 ರನ್ ಜೊತೆಯಾಟವಾಡಿದರು. ಭಾರತದ ಮೊತ್ತ 25 ಆಗಿದ್ದಾಗ ಕ್ರೀಸ್‌ಗೆ ಆಗಮಿಸಿದ ಕೊಹ್ಲಿ ತಂಡದ ಸ್ಕೋರ್ 276 ಆಗಿದ್ದಾಗ ಕ್ಯಾಚ್ ನೀಡಿ ಔಟಾದರು.

ಆಂದೋಲನ ಡೆಸ್ಕ್

Recent Posts

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

22 mins ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

3 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

4 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

4 hours ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

6 hours ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

6 hours ago