ಕ್ರೀಡೆ

ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ರವರ ಮತ್ತೊಂದು ದಾಖಲೆ ಮುರಿದ ವಿರಾಟ್‌ ಕೊಹ್ಲಿ

ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಖ್ಯಾತ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 25 ಸಾವಿರ ರನ್ ಕಲೆಹಾಕಿದ ಸಾಧನೆ ಮಾಡಿದ್ದಾರೆ. ಆ ಮೂಲಕ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ 8 ರನ್ ಗಳಿಸಿದ್ದಾಗ ಅವರು ಈ ಸಾಧನೆ ಮಾಡಿದರು. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 44 ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 20 ರನ್ ಗಳಿಸಿದರು.
2008ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕೊಹ್ಲಿ, ಈ ವರೆಗೆ 492 ಪಂದ್ಯಗಳ 549 ಇನ್ನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿ 25,012 ರನ್ ಕಲೆಹಾಕಿದ್ದಾರೆ. ಇದರೊಂದಿಗೆ ಅತ್ಯಧಿಕ ರನ್ ಗಳಿಸಿದ ದಾಖಲೆ ಹೊಂದಿರುವ ದಿಗ್ಗಜ ಬ್ಯಾಟರ್ ಸಚಿನ್ ಅವರಿಗೆ 25 ಸಾವಿರ ರನ್ ಗಳಿಸಲು 577 ಇನ್ನಿಂಗ್ಸ್‌ಗಳು ಬೇಕಾಗಿದ್ದವು. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರು 588 ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದರು.
ಕೊಹ್ಲಿ ಏಕದಿನ ಮಾದರಿಯಲ್ಲಿ 262 ಇನ್ನಿಂಗ್ಸ್‌ಗಳಿಂದ 12,809 ರನ್, ಟೆಸ್ಟ್ ಕ್ರಿಕೆಟ್‌ನಲ್ಲಿ 180 ಇನ್ನಿಂಗ್ಸ್‌ಗಳಿಂದ 8,195 ಮತ್ತು ಟಿ20 ಯಲ್ಲಿ 107 ಇನ್ನಿಂಗ್ಸ್‌ಗಳಿಂದ 4,008 ರನ್ ಗಳಿಸಿದ್ದಾರೆ.

ಅಧಿಕ ಸರಾಸರಿ ಹೊಂದಿರುವ ಕೊಹ್ಲಿ
ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ವರೆಗೆ ಆರು ಬ್ಯಾಟರ್‌ಗಳಷ್ಟೇ 25 ಸಾವಿರಕ್ಕಿಂತ ಅಧಿಕ ರನ್ ಗಳಿಸಿದ್ದಾರೆ. ಈ ಎಲ್ಲ ಬ್ಯಾಟರ್‌ಗಳ ಪೈಕಿ ಕೊಹ್ಲಿ ಅತ್ಯುತ್ತಮ (53ಕ್ಕಿಂತ ಅಧಿಕ) ಸರಾಸರಿ ಹೊಂದಿದ್ದಾರೆ. ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ ಅವರು 49.10 ಸರಾಸರಿ ಹೊಂದಿರುವುದೇ ಎರಡನೇ ಅತ್ಯುತ್ತಮ ಸರಾಸರಿಯಾಗಿದೆ. ಸಚಿನ್ ಬ್ಯಾಟಿಂಗ್ ಸರಾಸರಿ 48. 52ರ ಆಗಿದೆ.

ಕೊಹ್ಲಿ
492 ಪಂದ್ಯ
549 ಇನ್ನಿಂಗ್ಸ್
25,012 ರನ್

ಸಚಿನ್
520 ಪಂದ್ಯ
577 ಇನ್ನಿಂಗ್ಸ್
25,000 ರನ್

andolanait

Recent Posts

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

4 hours ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

4 hours ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

4 hours ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

4 hours ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

4 hours ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

4 hours ago