ಕ್ರೀಡೆ

ಏಕದಿನದಲ್ಲಿ ತ್ರಿಶತಕದತ್ತ ವಿರಾಟ್‌ ಕೊಹ್ಲಿ

ದುಬೈ: ಇಂದು ನಡೆಯುವ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ನ್ಯೂಜಿಲೆಂಡ್‌ ವಿರುದ್ಧದ ಪಂದ್ಯ ವಿರಾಟ್‌ ಕೊಹ್ಲಿಗೆ 300ನೇ ಅಂತರಾಷ್ಟ್ರೀಯ ಏಕದಿನ ಪಂದ್ಯವಾಗಿದೆ.

ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಕಣಕ್ಕಿಳಿದರೆ, ಈ ಸಾಧನೆ ಮಾಡಲಿರುವ ಭಾರತದ ಏಳನೇ ಬ್ಯಾಟರ್‌ ಎನಿಸಲಿದ್ದಾರೆ. ಮೊದಲ ಸ್ಥಾನದಲ್ಲಿ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ ಇದ್ದಾರೆ.

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಈಚೆಗೆ ನಡೆದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಶತಕ ಗಳಿಸಿದ್ದರು.

ವಿರಾಟ್‌ ಕೊಹ್ಲಿ 2008ರಲ್ಲಿ ದಂಬುಲಾದಲ್ಲಿ ಶ್ರೀಲಂಕಾದ ಎದುರು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಪ್ರಸ್ತುತ ಒಟ್ಟಾರೆ 299 ಪಂದ್ಯಗಳ ಮೂಲಕ 14,085 ರನ್‌ ಬಾರಿಸಿದ್ದಾರೆ.

300ಕ್ಕಿಂತ ಹೆಚ್ಚು ಪಂದ್ಯ ಆಡಿದ ಭಾರತೀಯರು:

                                                      ಪಂದ್ಯ       ರನ್‌
* ಸಚಿನ್‌ ತೆಂಡೂಲ್ಕರ್‌               463          18426
* ಮಹೇಂದ್ರ ಸಿಂಗ್‌ ಧೋನಿ        347          10599
* ರಾಹುಲ್‌ ದ್ರಾವಿಡ್‌                   340         10768
* ಮೊಹಮ್ಮದ್‌ ಅಜುರುದ್ದೀನ್‌   334          9378
* ಸೌರವ್‌ ಗಂಗೂಲಿ                      308        11221
* ಯುವರಾಜ್‌ ಸಿಂಗ್‌                    301          8609

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago