Categories: ಕ್ರೀಡೆ

ದಿಗ್ಗಜರ ದಾಖಲೆಯ ಮೇಲೆ ಕಣ್ಣಿಟ್ಟ ವಿರಾಟ್‌

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ.

ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. ಇತ್ತೀಚೆಗೆ ಭಾರತದಲ್ಲಿ ನಡೆದ ಟೆಸ್ಟ್‌ಗಳಲ್ಲಿ‌ ಉತ್ತಮ ಆಟ ಆಡುವಲ್ಲಿ ವಿಫಲರಾಗಿರುವ ವಿರಾಟ್‌ ಆಸ್ಟ್ರೇಲಿಯಾದಲ್ಲಿ ಫಾರ್ಮ್ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದಾರೆ.

ಬಾರ್ಡರ್-‌ ಗವಸ್ಕಾರ್‌ ಸರಣಿಯಲ್ಲಿ ವಿರಾಟ್‌ ಉತ್ತಮ ರನ್ ಕಲೆ ಹಾಕುವಲ್ಲಿ ಯಶಸ್ವಿಯಾದರೆ ಹಲವು ದಾಖಲೆಗಳು ಅವರ ಖಾತೆಯಲ್ಲಿ ಸೇರುತ್ತವೆ.

ಕ್ರಿಕೆಟ್‌ನ ದಿಗ್ಗಜ ಸಚಿನ್‌ ತೆಂಡೂಲ್ಕರ್ ಆಸ್ಟ್ರೇಲಿಯಾ ನೆಲದಲ್ಲಿ 1,809 ರನ್‌ ಗಳಿಸಿದ್ದಾರೆ. ವಿರಾಟ್‌ 458 ರನ್‌ ಗಳಿಸುವಲ್ಲಿ ಯಶಸ್ವಿಯಾದರೆ ಸಚಿನ್‌ ದಾಖಲೆ ಅಳಿಸಿ ಹಾಕಬಹುದು. ಈವರೆಗೆ ಕೊಹ್ಲಿ ಆಸ್ಟ್ರೇಲಿಯಾದಲ್ಲಿ 13 ಟೆಸ್ಟ್‌ ಪಂದ್ಯಗಳಿಂದ 54ರ ಸರಾಸರಿಯಲ್ಲಿ 1352 ರನ್‌ ಗಳಿಸಿದ್ದಾರೆ.

ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ ಪೂಜಾರ ಅವರು ಆಸ್ಟ್ರೇಲಿಯಾದ ವಿರುದ್ಧ 2074 ರನ್‌ ಗಳಿಸಿದ್ದಾರೆ. ಈ ಸರಣಿಯಲ್ಲಿ ವಿರಾಟ್‌ ಕೊಹ್ಲಿ 33 ರನ್‌ ಗಳಿಸಿದರೆ ಇವರ ದಾಖಲೆಯನ್ನು ಮುರಿಯುತ್ತಾರೆ.

ಭಾರತದ ಟೆಸ್ಟ್‌ ಕ್ರಿಕೆಟ್‌ನ ಗೋಡೆ ಎಂದೇ ಖ್ಯಾತಿಯಾಗಿರುವ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಈವರೆಗೆ ನಡೆದಿರುವ ಬಾರ್ಡರ್-ಗವಸ್ಕಾರ್‌ ಸರಣಿಯಲ್ಲಿ ಒಟ್ಟು 2143 ರನ್‌ ಗಳಿಸಿದ್ದಾರೆ. ವಿರಾಟ್‌ಗೆ ಈ ದಾಖಲೆಯನ್ನು ಮೆಟ್ಟಿನಿಲ್ಲಲು ಇನ್ನು 102 ರನ್‌ಗಳ ಆವಶ್ಯಕತೆ ಇದೆ.

ವಿರಾಟ್‌ ಕೊಹ್ಲಿ ಇಲ್ಲಿಯವರೆಗೆ ಆಸ್ಟ್ರೇಲಿಯಾದ ವಿರುದ್ಧ 25 ಟೆಸ್ಟ್‌ ಪಂದ್ಯಗಳಲ್ಲಿ 2042 ರನ್‌ಗಳಿಸಿದ್ದು, 47.48ರ ಸರಾಸರಿಯಲ್ಲಿ ಬ್ಯಾಟ್‌ ಬೀಸಿದ್ದಾರೆ. ಇದರಲ್ಲಿ 8 ಶತಕ ಹಾಗೂ 5 ಅರ್ಧಶತಕಗಳು ಇವರ ಬ್ಯಾಟ್‌ನಿಂದ ಬಂದಿದೆ.

ಆಂದೋಲನ ಡೆಸ್ಕ್

Recent Posts

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

7 mins ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

39 mins ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

2 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

2 hours ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

3 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

4 hours ago