Categories: ಕ್ರೀಡೆ

ದಿಗ್ಗಜರ ದಾಖಲೆಯ ಮೇಲೆ ಕಣ್ಣಿಟ್ಟ ವಿರಾಟ್‌

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ.

ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. ಇತ್ತೀಚೆಗೆ ಭಾರತದಲ್ಲಿ ನಡೆದ ಟೆಸ್ಟ್‌ಗಳಲ್ಲಿ‌ ಉತ್ತಮ ಆಟ ಆಡುವಲ್ಲಿ ವಿಫಲರಾಗಿರುವ ವಿರಾಟ್‌ ಆಸ್ಟ್ರೇಲಿಯಾದಲ್ಲಿ ಫಾರ್ಮ್ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದಾರೆ.

ಬಾರ್ಡರ್-‌ ಗವಸ್ಕಾರ್‌ ಸರಣಿಯಲ್ಲಿ ವಿರಾಟ್‌ ಉತ್ತಮ ರನ್ ಕಲೆ ಹಾಕುವಲ್ಲಿ ಯಶಸ್ವಿಯಾದರೆ ಹಲವು ದಾಖಲೆಗಳು ಅವರ ಖಾತೆಯಲ್ಲಿ ಸೇರುತ್ತವೆ.

ಕ್ರಿಕೆಟ್‌ನ ದಿಗ್ಗಜ ಸಚಿನ್‌ ತೆಂಡೂಲ್ಕರ್ ಆಸ್ಟ್ರೇಲಿಯಾ ನೆಲದಲ್ಲಿ 1,809 ರನ್‌ ಗಳಿಸಿದ್ದಾರೆ. ವಿರಾಟ್‌ 458 ರನ್‌ ಗಳಿಸುವಲ್ಲಿ ಯಶಸ್ವಿಯಾದರೆ ಸಚಿನ್‌ ದಾಖಲೆ ಅಳಿಸಿ ಹಾಕಬಹುದು. ಈವರೆಗೆ ಕೊಹ್ಲಿ ಆಸ್ಟ್ರೇಲಿಯಾದಲ್ಲಿ 13 ಟೆಸ್ಟ್‌ ಪಂದ್ಯಗಳಿಂದ 54ರ ಸರಾಸರಿಯಲ್ಲಿ 1352 ರನ್‌ ಗಳಿಸಿದ್ದಾರೆ.

ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ ಪೂಜಾರ ಅವರು ಆಸ್ಟ್ರೇಲಿಯಾದ ವಿರುದ್ಧ 2074 ರನ್‌ ಗಳಿಸಿದ್ದಾರೆ. ಈ ಸರಣಿಯಲ್ಲಿ ವಿರಾಟ್‌ ಕೊಹ್ಲಿ 33 ರನ್‌ ಗಳಿಸಿದರೆ ಇವರ ದಾಖಲೆಯನ್ನು ಮುರಿಯುತ್ತಾರೆ.

ಭಾರತದ ಟೆಸ್ಟ್‌ ಕ್ರಿಕೆಟ್‌ನ ಗೋಡೆ ಎಂದೇ ಖ್ಯಾತಿಯಾಗಿರುವ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಈವರೆಗೆ ನಡೆದಿರುವ ಬಾರ್ಡರ್-ಗವಸ್ಕಾರ್‌ ಸರಣಿಯಲ್ಲಿ ಒಟ್ಟು 2143 ರನ್‌ ಗಳಿಸಿದ್ದಾರೆ. ವಿರಾಟ್‌ಗೆ ಈ ದಾಖಲೆಯನ್ನು ಮೆಟ್ಟಿನಿಲ್ಲಲು ಇನ್ನು 102 ರನ್‌ಗಳ ಆವಶ್ಯಕತೆ ಇದೆ.

ವಿರಾಟ್‌ ಕೊಹ್ಲಿ ಇಲ್ಲಿಯವರೆಗೆ ಆಸ್ಟ್ರೇಲಿಯಾದ ವಿರುದ್ಧ 25 ಟೆಸ್ಟ್‌ ಪಂದ್ಯಗಳಲ್ಲಿ 2042 ರನ್‌ಗಳಿಸಿದ್ದು, 47.48ರ ಸರಾಸರಿಯಲ್ಲಿ ಬ್ಯಾಟ್‌ ಬೀಸಿದ್ದಾರೆ. ಇದರಲ್ಲಿ 8 ಶತಕ ಹಾಗೂ 5 ಅರ್ಧಶತಕಗಳು ಇವರ ಬ್ಯಾಟ್‌ನಿಂದ ಬಂದಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗಮಧ್ಯೆ ಎರಡು ಚಿರತೆಗಳು ಪ್ರತ್ಯಕ್ಷ: ಆತಂಕದಲ್ಲಿ ವಾಹನ ಸವಾರರು

ಮಹಾದೇಶ್‌ ಎಂ ಗೌಡ  ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…

28 mins ago

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

3 hours ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

3 hours ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

3 hours ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

4 hours ago