Categories: ಕ್ರೀಡೆ

ದಿಗ್ಗಜರ ದಾಖಲೆಯ ಮೇಲೆ ಕಣ್ಣಿಟ್ಟ ವಿರಾಟ್‌

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ.

ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. ಇತ್ತೀಚೆಗೆ ಭಾರತದಲ್ಲಿ ನಡೆದ ಟೆಸ್ಟ್‌ಗಳಲ್ಲಿ‌ ಉತ್ತಮ ಆಟ ಆಡುವಲ್ಲಿ ವಿಫಲರಾಗಿರುವ ವಿರಾಟ್‌ ಆಸ್ಟ್ರೇಲಿಯಾದಲ್ಲಿ ಫಾರ್ಮ್ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದಾರೆ.

ಬಾರ್ಡರ್-‌ ಗವಸ್ಕಾರ್‌ ಸರಣಿಯಲ್ಲಿ ವಿರಾಟ್‌ ಉತ್ತಮ ರನ್ ಕಲೆ ಹಾಕುವಲ್ಲಿ ಯಶಸ್ವಿಯಾದರೆ ಹಲವು ದಾಖಲೆಗಳು ಅವರ ಖಾತೆಯಲ್ಲಿ ಸೇರುತ್ತವೆ.

ಕ್ರಿಕೆಟ್‌ನ ದಿಗ್ಗಜ ಸಚಿನ್‌ ತೆಂಡೂಲ್ಕರ್ ಆಸ್ಟ್ರೇಲಿಯಾ ನೆಲದಲ್ಲಿ 1,809 ರನ್‌ ಗಳಿಸಿದ್ದಾರೆ. ವಿರಾಟ್‌ 458 ರನ್‌ ಗಳಿಸುವಲ್ಲಿ ಯಶಸ್ವಿಯಾದರೆ ಸಚಿನ್‌ ದಾಖಲೆ ಅಳಿಸಿ ಹಾಕಬಹುದು. ಈವರೆಗೆ ಕೊಹ್ಲಿ ಆಸ್ಟ್ರೇಲಿಯಾದಲ್ಲಿ 13 ಟೆಸ್ಟ್‌ ಪಂದ್ಯಗಳಿಂದ 54ರ ಸರಾಸರಿಯಲ್ಲಿ 1352 ರನ್‌ ಗಳಿಸಿದ್ದಾರೆ.

ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ ಪೂಜಾರ ಅವರು ಆಸ್ಟ್ರೇಲಿಯಾದ ವಿರುದ್ಧ 2074 ರನ್‌ ಗಳಿಸಿದ್ದಾರೆ. ಈ ಸರಣಿಯಲ್ಲಿ ವಿರಾಟ್‌ ಕೊಹ್ಲಿ 33 ರನ್‌ ಗಳಿಸಿದರೆ ಇವರ ದಾಖಲೆಯನ್ನು ಮುರಿಯುತ್ತಾರೆ.

ಭಾರತದ ಟೆಸ್ಟ್‌ ಕ್ರಿಕೆಟ್‌ನ ಗೋಡೆ ಎಂದೇ ಖ್ಯಾತಿಯಾಗಿರುವ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಈವರೆಗೆ ನಡೆದಿರುವ ಬಾರ್ಡರ್-ಗವಸ್ಕಾರ್‌ ಸರಣಿಯಲ್ಲಿ ಒಟ್ಟು 2143 ರನ್‌ ಗಳಿಸಿದ್ದಾರೆ. ವಿರಾಟ್‌ಗೆ ಈ ದಾಖಲೆಯನ್ನು ಮೆಟ್ಟಿನಿಲ್ಲಲು ಇನ್ನು 102 ರನ್‌ಗಳ ಆವಶ್ಯಕತೆ ಇದೆ.

ವಿರಾಟ್‌ ಕೊಹ್ಲಿ ಇಲ್ಲಿಯವರೆಗೆ ಆಸ್ಟ್ರೇಲಿಯಾದ ವಿರುದ್ಧ 25 ಟೆಸ್ಟ್‌ ಪಂದ್ಯಗಳಲ್ಲಿ 2042 ರನ್‌ಗಳಿಸಿದ್ದು, 47.48ರ ಸರಾಸರಿಯಲ್ಲಿ ಬ್ಯಾಟ್‌ ಬೀಸಿದ್ದಾರೆ. ಇದರಲ್ಲಿ 8 ಶತಕ ಹಾಗೂ 5 ಅರ್ಧಶತಕಗಳು ಇವರ ಬ್ಯಾಟ್‌ನಿಂದ ಬಂದಿದೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

8 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

10 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

10 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

11 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

11 hours ago