Categories: ಕ್ರೀಡೆ

ದಿಗ್ಗಜರ ದಾಖಲೆಯ ಮೇಲೆ ಕಣ್ಣಿಟ್ಟ ವಿರಾಟ್‌

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ.

ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. ಇತ್ತೀಚೆಗೆ ಭಾರತದಲ್ಲಿ ನಡೆದ ಟೆಸ್ಟ್‌ಗಳಲ್ಲಿ‌ ಉತ್ತಮ ಆಟ ಆಡುವಲ್ಲಿ ವಿಫಲರಾಗಿರುವ ವಿರಾಟ್‌ ಆಸ್ಟ್ರೇಲಿಯಾದಲ್ಲಿ ಫಾರ್ಮ್ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದಾರೆ.

ಬಾರ್ಡರ್-‌ ಗವಸ್ಕಾರ್‌ ಸರಣಿಯಲ್ಲಿ ವಿರಾಟ್‌ ಉತ್ತಮ ರನ್ ಕಲೆ ಹಾಕುವಲ್ಲಿ ಯಶಸ್ವಿಯಾದರೆ ಹಲವು ದಾಖಲೆಗಳು ಅವರ ಖಾತೆಯಲ್ಲಿ ಸೇರುತ್ತವೆ.

ಕ್ರಿಕೆಟ್‌ನ ದಿಗ್ಗಜ ಸಚಿನ್‌ ತೆಂಡೂಲ್ಕರ್ ಆಸ್ಟ್ರೇಲಿಯಾ ನೆಲದಲ್ಲಿ 1,809 ರನ್‌ ಗಳಿಸಿದ್ದಾರೆ. ವಿರಾಟ್‌ 458 ರನ್‌ ಗಳಿಸುವಲ್ಲಿ ಯಶಸ್ವಿಯಾದರೆ ಸಚಿನ್‌ ದಾಖಲೆ ಅಳಿಸಿ ಹಾಕಬಹುದು. ಈವರೆಗೆ ಕೊಹ್ಲಿ ಆಸ್ಟ್ರೇಲಿಯಾದಲ್ಲಿ 13 ಟೆಸ್ಟ್‌ ಪಂದ್ಯಗಳಿಂದ 54ರ ಸರಾಸರಿಯಲ್ಲಿ 1352 ರನ್‌ ಗಳಿಸಿದ್ದಾರೆ.

ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ ಪೂಜಾರ ಅವರು ಆಸ್ಟ್ರೇಲಿಯಾದ ವಿರುದ್ಧ 2074 ರನ್‌ ಗಳಿಸಿದ್ದಾರೆ. ಈ ಸರಣಿಯಲ್ಲಿ ವಿರಾಟ್‌ ಕೊಹ್ಲಿ 33 ರನ್‌ ಗಳಿಸಿದರೆ ಇವರ ದಾಖಲೆಯನ್ನು ಮುರಿಯುತ್ತಾರೆ.

ಭಾರತದ ಟೆಸ್ಟ್‌ ಕ್ರಿಕೆಟ್‌ನ ಗೋಡೆ ಎಂದೇ ಖ್ಯಾತಿಯಾಗಿರುವ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಈವರೆಗೆ ನಡೆದಿರುವ ಬಾರ್ಡರ್-ಗವಸ್ಕಾರ್‌ ಸರಣಿಯಲ್ಲಿ ಒಟ್ಟು 2143 ರನ್‌ ಗಳಿಸಿದ್ದಾರೆ. ವಿರಾಟ್‌ಗೆ ಈ ದಾಖಲೆಯನ್ನು ಮೆಟ್ಟಿನಿಲ್ಲಲು ಇನ್ನು 102 ರನ್‌ಗಳ ಆವಶ್ಯಕತೆ ಇದೆ.

ವಿರಾಟ್‌ ಕೊಹ್ಲಿ ಇಲ್ಲಿಯವರೆಗೆ ಆಸ್ಟ್ರೇಲಿಯಾದ ವಿರುದ್ಧ 25 ಟೆಸ್ಟ್‌ ಪಂದ್ಯಗಳಲ್ಲಿ 2042 ರನ್‌ಗಳಿಸಿದ್ದು, 47.48ರ ಸರಾಸರಿಯಲ್ಲಿ ಬ್ಯಾಟ್‌ ಬೀಸಿದ್ದಾರೆ. ಇದರಲ್ಲಿ 8 ಶತಕ ಹಾಗೂ 5 ಅರ್ಧಶತಕಗಳು ಇವರ ಬ್ಯಾಟ್‌ನಿಂದ ಬಂದಿದೆ.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

9 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

9 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

9 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

10 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

11 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

11 hours ago