Categories: ಕ್ರೀಡೆ

ದಿಗ್ಗಜರ ದಾಖಲೆಯ ಮೇಲೆ ಕಣ್ಣಿಟ್ಟ ವಿರಾಟ್‌

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ.

ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. ಇತ್ತೀಚೆಗೆ ಭಾರತದಲ್ಲಿ ನಡೆದ ಟೆಸ್ಟ್‌ಗಳಲ್ಲಿ‌ ಉತ್ತಮ ಆಟ ಆಡುವಲ್ಲಿ ವಿಫಲರಾಗಿರುವ ವಿರಾಟ್‌ ಆಸ್ಟ್ರೇಲಿಯಾದಲ್ಲಿ ಫಾರ್ಮ್ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದಾರೆ.

ಬಾರ್ಡರ್-‌ ಗವಸ್ಕಾರ್‌ ಸರಣಿಯಲ್ಲಿ ವಿರಾಟ್‌ ಉತ್ತಮ ರನ್ ಕಲೆ ಹಾಕುವಲ್ಲಿ ಯಶಸ್ವಿಯಾದರೆ ಹಲವು ದಾಖಲೆಗಳು ಅವರ ಖಾತೆಯಲ್ಲಿ ಸೇರುತ್ತವೆ.

ಕ್ರಿಕೆಟ್‌ನ ದಿಗ್ಗಜ ಸಚಿನ್‌ ತೆಂಡೂಲ್ಕರ್ ಆಸ್ಟ್ರೇಲಿಯಾ ನೆಲದಲ್ಲಿ 1,809 ರನ್‌ ಗಳಿಸಿದ್ದಾರೆ. ವಿರಾಟ್‌ 458 ರನ್‌ ಗಳಿಸುವಲ್ಲಿ ಯಶಸ್ವಿಯಾದರೆ ಸಚಿನ್‌ ದಾಖಲೆ ಅಳಿಸಿ ಹಾಕಬಹುದು. ಈವರೆಗೆ ಕೊಹ್ಲಿ ಆಸ್ಟ್ರೇಲಿಯಾದಲ್ಲಿ 13 ಟೆಸ್ಟ್‌ ಪಂದ್ಯಗಳಿಂದ 54ರ ಸರಾಸರಿಯಲ್ಲಿ 1352 ರನ್‌ ಗಳಿಸಿದ್ದಾರೆ.

ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ ಪೂಜಾರ ಅವರು ಆಸ್ಟ್ರೇಲಿಯಾದ ವಿರುದ್ಧ 2074 ರನ್‌ ಗಳಿಸಿದ್ದಾರೆ. ಈ ಸರಣಿಯಲ್ಲಿ ವಿರಾಟ್‌ ಕೊಹ್ಲಿ 33 ರನ್‌ ಗಳಿಸಿದರೆ ಇವರ ದಾಖಲೆಯನ್ನು ಮುರಿಯುತ್ತಾರೆ.

ಭಾರತದ ಟೆಸ್ಟ್‌ ಕ್ರಿಕೆಟ್‌ನ ಗೋಡೆ ಎಂದೇ ಖ್ಯಾತಿಯಾಗಿರುವ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಈವರೆಗೆ ನಡೆದಿರುವ ಬಾರ್ಡರ್-ಗವಸ್ಕಾರ್‌ ಸರಣಿಯಲ್ಲಿ ಒಟ್ಟು 2143 ರನ್‌ ಗಳಿಸಿದ್ದಾರೆ. ವಿರಾಟ್‌ಗೆ ಈ ದಾಖಲೆಯನ್ನು ಮೆಟ್ಟಿನಿಲ್ಲಲು ಇನ್ನು 102 ರನ್‌ಗಳ ಆವಶ್ಯಕತೆ ಇದೆ.

ವಿರಾಟ್‌ ಕೊಹ್ಲಿ ಇಲ್ಲಿಯವರೆಗೆ ಆಸ್ಟ್ರೇಲಿಯಾದ ವಿರುದ್ಧ 25 ಟೆಸ್ಟ್‌ ಪಂದ್ಯಗಳಲ್ಲಿ 2042 ರನ್‌ಗಳಿಸಿದ್ದು, 47.48ರ ಸರಾಸರಿಯಲ್ಲಿ ಬ್ಯಾಟ್‌ ಬೀಸಿದ್ದಾರೆ. ಇದರಲ್ಲಿ 8 ಶತಕ ಹಾಗೂ 5 ಅರ್ಧಶತಕಗಳು ಇವರ ಬ್ಯಾಟ್‌ನಿಂದ ಬಂದಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

14 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

14 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

14 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

14 hours ago