Categories: ಕ್ರೀಡೆ

ದಿಗ್ಗಜರ ದಾಖಲೆಯ ಮೇಲೆ ಕಣ್ಣಿಟ್ಟ ವಿರಾಟ್‌

ಆಸ್ಟ್ರೇಲಿಯಾ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-‌ ಗವಸ್ಕಾರ್‌ ಟೆಸ್ಟ್‌ ಸರಣಿಯು ಇದೇ ನವೆಂಬರ್‌.22ರಂದು ಪರ್ತ್‌ನಲ್ಲಿ ನಡೆಯಲಿದೆ.

ಹಲವು ದಾಖಲೆಯ ಹೊಸ್ತಿಲಲ್ಲಿರುವ, ರನ್‌ ಮೆಷಿನ್‌ ಎಂದು ಖ್ಯಾತಿ ಪಡೆದಿರುವ ವಿರಾಟ್‌ ಕೊಹ್ಲಿ ಅವರ ಮೇಲೆಯೇ ಈ ಬಾರಿ ಎಲ್ಲರ ಕಣ್ಣು ನೆಟ್ಟಿದೆ. ಇತ್ತೀಚೆಗೆ ಭಾರತದಲ್ಲಿ ನಡೆದ ಟೆಸ್ಟ್‌ಗಳಲ್ಲಿ‌ ಉತ್ತಮ ಆಟ ಆಡುವಲ್ಲಿ ವಿಫಲರಾಗಿರುವ ವಿರಾಟ್‌ ಆಸ್ಟ್ರೇಲಿಯಾದಲ್ಲಿ ಫಾರ್ಮ್ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದಾರೆ.

ಬಾರ್ಡರ್-‌ ಗವಸ್ಕಾರ್‌ ಸರಣಿಯಲ್ಲಿ ವಿರಾಟ್‌ ಉತ್ತಮ ರನ್ ಕಲೆ ಹಾಕುವಲ್ಲಿ ಯಶಸ್ವಿಯಾದರೆ ಹಲವು ದಾಖಲೆಗಳು ಅವರ ಖಾತೆಯಲ್ಲಿ ಸೇರುತ್ತವೆ.

ಕ್ರಿಕೆಟ್‌ನ ದಿಗ್ಗಜ ಸಚಿನ್‌ ತೆಂಡೂಲ್ಕರ್ ಆಸ್ಟ್ರೇಲಿಯಾ ನೆಲದಲ್ಲಿ 1,809 ರನ್‌ ಗಳಿಸಿದ್ದಾರೆ. ವಿರಾಟ್‌ 458 ರನ್‌ ಗಳಿಸುವಲ್ಲಿ ಯಶಸ್ವಿಯಾದರೆ ಸಚಿನ್‌ ದಾಖಲೆ ಅಳಿಸಿ ಹಾಕಬಹುದು. ಈವರೆಗೆ ಕೊಹ್ಲಿ ಆಸ್ಟ್ರೇಲಿಯಾದಲ್ಲಿ 13 ಟೆಸ್ಟ್‌ ಪಂದ್ಯಗಳಿಂದ 54ರ ಸರಾಸರಿಯಲ್ಲಿ 1352 ರನ್‌ ಗಳಿಸಿದ್ದಾರೆ.

ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ ಪೂಜಾರ ಅವರು ಆಸ್ಟ್ರೇಲಿಯಾದ ವಿರುದ್ಧ 2074 ರನ್‌ ಗಳಿಸಿದ್ದಾರೆ. ಈ ಸರಣಿಯಲ್ಲಿ ವಿರಾಟ್‌ ಕೊಹ್ಲಿ 33 ರನ್‌ ಗಳಿಸಿದರೆ ಇವರ ದಾಖಲೆಯನ್ನು ಮುರಿಯುತ್ತಾರೆ.

ಭಾರತದ ಟೆಸ್ಟ್‌ ಕ್ರಿಕೆಟ್‌ನ ಗೋಡೆ ಎಂದೇ ಖ್ಯಾತಿಯಾಗಿರುವ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಈವರೆಗೆ ನಡೆದಿರುವ ಬಾರ್ಡರ್-ಗವಸ್ಕಾರ್‌ ಸರಣಿಯಲ್ಲಿ ಒಟ್ಟು 2143 ರನ್‌ ಗಳಿಸಿದ್ದಾರೆ. ವಿರಾಟ್‌ಗೆ ಈ ದಾಖಲೆಯನ್ನು ಮೆಟ್ಟಿನಿಲ್ಲಲು ಇನ್ನು 102 ರನ್‌ಗಳ ಆವಶ್ಯಕತೆ ಇದೆ.

ವಿರಾಟ್‌ ಕೊಹ್ಲಿ ಇಲ್ಲಿಯವರೆಗೆ ಆಸ್ಟ್ರೇಲಿಯಾದ ವಿರುದ್ಧ 25 ಟೆಸ್ಟ್‌ ಪಂದ್ಯಗಳಲ್ಲಿ 2042 ರನ್‌ಗಳಿಸಿದ್ದು, 47.48ರ ಸರಾಸರಿಯಲ್ಲಿ ಬ್ಯಾಟ್‌ ಬೀಸಿದ್ದಾರೆ. ಇದರಲ್ಲಿ 8 ಶತಕ ಹಾಗೂ 5 ಅರ್ಧಶತಕಗಳು ಇವರ ಬ್ಯಾಟ್‌ನಿಂದ ಬಂದಿದೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

52 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

58 mins ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

17 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

18 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

19 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

20 hours ago