Categories: ಕ್ರೀಡೆ

End of An Era : 14 ವರ್ಷ, 123 ಟೆಸ್ಟ್ ವಿರಾಟ್‌ ಸಾಧನೆ

ಹೊಸದಿಲ್ಲಿ : ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಕಿಂಗ್‌ ವಿರಾಟ್‌ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವ ಮೂಲಕ ತಮ್ಮ 14 ವರ್ಷದ ಟೆಸ್ಟ್‌ ಕ್ರಿಕೆಟ್‌ಗೆ ಭಾವನಾತ್ಮಕ ವಿದಾಯ ಹೇಳಿದ್ದಾರೆ.

ವಿರಾಟ್‌ ಕೊಹ್ಲಿ ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ ಏನೆಲ್ಲ ಸಾಧನೆ ಮಾಡಿದ್ದಾರೆ ಎಂಬುದು ಇಲ್ಲಿದೆ.

ವಿರಾಟ್‌, ಭಾರತದ ಟೆಸ್ಟ್‌ ಕ್ರಿಕೆಟ್‌ನ ಅತ್ಯಂತ ಯಶಸ್ವಿ ನಾಯಕ. ಅವರ ನಾಯಕತ್ವದಲ್ಲಿ ಟೀಮ್‌ ಇಂಡಿಯಾ 68 ಪಂದ್ಯಗಳನ್ನು ಆಡಿದ್ದು, 40 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಭಾರತ ತಂಡ 2018-19ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಿ ಟೆಸ್ಟ್‌ ಸರಣಿಯನ್ನು ಗೆದ್ದಿತ್ತು. ಆಸ್ಟ್ರೇಲಿಯಾದಲ್ಲಿ ಟೆಸ್ಟ್‌ ಸರಣಿ ಗೆದ್ದ ಭಾರತ ಮತ್ತು ಏಷ್ಯಾದ ಮೊದಲ ನಾಯಕ ವಿರಾಟ್‌ ಕೊಹ್ಲಿ ಆಗಿದ್ದಾರೆ.

ಇದನ್ನೂ ಓದಿ:- ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯ 

ಟೆಸ್ಟ್‌ ಕ್ರಿಕೆಟ್‌ನಲ್ಲಿ 7 ದ್ವಿಶತಕಗಳನ್ನು ಗಳಿಸಿದ್ದಾರೆ. ಈ ಅವಧಿಯಲ್ಲಿ ಅತಿ ಹೆಚ್ಚು ದ್ವಿಶತಕಗಳನ್ನು ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ ಕೂಡ ವಿರಾಟ್‌ ಕೊಹ್ಲಿಯೇ ಆಗಿದ್ದಾರೆ.

2019 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ವಿರಾಟ್‌ ಅಜೇಯ 254ರನ್‌ ಗಳಿಸಿ ಟೆಸ್ಟ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್‌ ಗಳಿಸಿದ ನಾಯಕರಾಗಿದ್ದಾರೆ. ಅಲ್ಲದೇ ತವರಿನಲ್ಲಿ ಆಡಿದ ಎಲ್ಲಾ ಸರಣಿಯನ್ನು ಕೊಹ್ಲಿ ತಮ್ಮ ನಾಯಕತ್ವದಲ್ಲಿ ಗೆದ್ದಿದ್ದರು.

ಪದಾರ್ಪಣೆ : 2011 ಜೂನ್‌ 20-23 Vs ವೆಸ್ಟ್‌ ಇಂಡೀಸ್‌
ಕೊನೆಯ ಟೆಸ್ಟ್‌ : 2025 ಜನವರಿ 03-05 Vs ಆಸ್ಟ್ರೇಲಿಯಾ
ಟೆಸ್ಟ್‌ ಪಂದ್ಯಗಳು : 123
ಇನ್ನಿಂಗ್ಸ್‌ : 210
ನಾಟೌಟ್‌ : 13
ರನ್‌ : 9230
ಗರಿಷ್ಟ ರನ್‌ :254*
ಸರಾಸರಿ :46.85
ಸ್ಟ್ರೈಕ್‌ ರೇಟ್‌ : 55.57
ದ್ವಿಶತಕ : 7
ಶತಕ : 30
ಅರ್ಧಶತಕ :31
ಬೌಂಡರಿ : 1027
ಸಿಕ್ಸರ್‌ : 30
ಕ್ಯಾಚ್‌ : 121

ಆಂದೋಲನ ಡೆಸ್ಕ್

Recent Posts

ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರೂ ನೇಣಿಗೆ ಶರಣಾದ ಬಾಲಕಿ…!

ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…

4 mins ago

ಮಿರ್ಜಾಪುರದಲ್ಲಿ ಸರಣಿ ಅಪಘಾತ: 11 ಮಂದಿ ಸಾವು

ಮಿರ್ಜಾಪುರ (ಉತ್ತರ ಪ್ರದೇಶ): ಬಹು ವಾಹನಗಳು ಡಿಕ್ಕಿಯಾಗಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿರುವ…

2 hours ago

ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಚಿಂತನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಕೆಯ ಚಿಂತನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪೆಟ್ರೋಲ್‌ ಮತ್ತು…

2 hours ago

ಮಂಡ್ಯದಲ್ಲಿ ಸಿಇಟಿ ಗದ್ದಲ: ವಿದ್ಯಾರ್ಥಿನಿಯರ ಓಲೆ ಬಿಚ್ಚಿಸಿದ ಪರಿವೀಕ್ಷಕರು

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…

2 hours ago

ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಬೆಂಕಿ: ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲು

ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…

3 hours ago

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ | ನಾಳೆ ವಿಶೇಷ ಸಂಪುಟ ಸಭೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago