ನವದೆಹಲಿ: ಟೀಂ ಇಂಡಿಯಾದ ಬಹುಬೇಡಿಕೆಯ ಆಟಗಾರ ವಿರಾಟ್ ಕೊಹ್ಲಿ, 12 ವರ್ಷಗಳ ಬಳಿಕ ರಣಜಿ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದು ದೆಹಲಿ ತಂಡದ ಪರವಾಗಿ ಮೈದಾನಕ್ಕಿಳಿದಿದ್ದಾರೆ.
ಇಂದು (ಜ.30) ಅರುಣ್ ಜೇಟ್ಲಿ ಮೈದಾನದಲ್ಲಿ ರೈಲ್ವೇಸ್ ತಂಡದ ವಿರುದ್ಧ ಆರಂಭವಾದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೈದಾನಕ್ಕಿಳಿದಿದ್ದಾರೆ. ಈ ವೇಳೆ ಸ್ಟೇಡಿಯಂ ಹೊರಗಡೆ ಅವರನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು ನೂಕುನುಗ್ಗಲು ಉಂಟಾಗಿ ಒಂದಿಬ್ಬರು ಕೆಳಕ್ಕೆ ಬಿದ್ದು ಗಾಯಗಳಾಗಿವೆ ಎಂದು ವರದಿಯಾಗಿದೆ.
ನಾನು 30 ವರ್ಷ ದೆಹಲಿ ಕ್ರಿಕೆಟ್ನಲ್ಲಿ ಸಕ್ರಿಯವಾಗಿದ್ದೇನೆ. ಆದರೆ ರಣಜಿ ಪಂದ್ಯವೊಂದರಲ್ಲಿ ಇಂತಹ ದೃಶ್ಯಗಳನ್ನು ನೋಡಿರಲಿಲ್ಲ. ಇದು ಕೊಹ್ಲಿ ಜನಪ್ರಿಯತೆಗೆ ಸಾಟಿಯಿಲ್ಲ ಎಂದು ತೋರಿಸುತ್ತದೆ ಎಂದು ಡಿಡಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೊಹ್ಲಿ ಕೊನೆಯದಾಗಿ 2012ರಲ್ಲಿ ಉತ್ತರ ಪ್ರದೇಶದ ವಿರುದ್ಧ ಆಡಿದ್ದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…