ಕ್ರೀಡೆ

ವಿರಾಟ್‌ ಕೊಹ್ಲಿ ನ್ಯೂ ಹೇರ್​ಸ್ಟ್ರೈಲ್ ಗೆ ಅಭಿಮಾನಿಗಳು ಫಿದಾ

ಏಷ್ಯಾ ಕಪ್​ನಲ್ಲಿ ಭರ್ಜರಿ ಶತಕದ ಮೂಲಕ ಫಾರ್ಮ್​ಗೆ ಮರಳಿರುವ ವಿರಾಟ್​ ವಿಶ್ವಕಪ್​ ಸಿದ್ಧತೆಯಲ್ಲಿದ್ದಾರೆ. ಈ ನಡುವೆ ಅವರು ಹೊಸ ಹೇರ್​ಸ್ಟ್ರೈಲ್​  ಮಾಡಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇವರು ಈ ನ್ಯೂ ಲುಕ್‌ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಆಸ್ಟ್ರೇಲಿಯಾ ಸರಣಿಯ ಮೊದಲ ಟಿ20 ಪಂದ್ಯ ಪಂಜಾಬ್​ನ ಮೊಹಾಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊಹಾಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ವಿರಾಟ್​ ಕೊಹ್ಲಿ ತಮ್ಮದೇ ಫ್ಯಾಷನ್​ನಿಂದಾಗಿ ಗಮನ ಸೆಳೆದಿದ್ದಾರೆ. ರನ್​ ಮಷಿನ್​ ಹೊಸ ಹೇರ್​ಸ್ಟೈಲ್​ನಲ್ಲಿ ಮಿಂಚಿದ್ದಾರೆ. ವಿಶ್ವಕಪ್​ಗೂ ಮೊದಲು ವಿರಾಟ್​ರ ಹೊಸ ಹೇರ್​ಸ್ಟ್ರೈಲ್​ ಅಭಿಮಾನಿಗಳ ಗಮನ ಸೆಳೆದಿದೆ.ವಿರಾಟ್​ ಕೊಹ್ಲಿ ಮೊಹಾಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಡಿಯೋವನ್ನು ಪಂಜಾಬ್​ ಕ್ರಿಕೆಟ್​ ಸಂಸ್ಥೆ(ಪಿಸಿಎ) ತನ್ನ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ಹೊಸ ಕೂದಲ ವಿನ್ಯಾಸದಲ್ಲಿ ವಿರಾಟ್​ ಮಿಂಚುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗುತ್ತಿವೆ.

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆದ ರಶೀದ್ ಸಲ್ಮಾನಿ ಕೊಹ್ಲಿಯ ಕೂದಲಿಗೆ ಹೊಸ ಲುಕ್ ತಂದಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ರಶೀದ್​ ತಮ್ಮ ಇನ್‌ಸ್ಟಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ತರಹೇವಾರಿಯಾಗಿ ಕಮೆಂಟ್​ ಮಾಡಿದ್ದು, ಮೆಚ್ಚಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್​ನಲ್ಲಿ ರನ್ ಮಷಿನ್ ವಿರಾಟ್​ ಕೊಹ್ಲಿ 3 ವರ್ಷಗಳ ಬಳಿಕ ಅಂದರೆ 1020 ದಿನಗಳ ನಂತರ ಶತಕ ಬಾರಿಸಿ ಕಾಂಗರೂ ನಾಡಿನಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ ತಾವು ರೆಡಿ ಎಂಬ ಸಂದೇಶ ರವಾನೆ ಮಾಡಿದ್ದಾರೆ.
71 ನೇ ಶತಕವನ್ನು ದಾಖಲಿಸುವ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ರಿಕ್ಕಿ ಪಾಂಟಿಂಗ್​ ಅವರ 71 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದರು. ವಿಶ್ವಕಪ್​ನಲ್ಲಿ ಇನ್ನೊಂದು ಶತಕ ಬಾರಿಸಿದರೂ ವಿಶ್ವ ಕ್ರಿಕೆಟ್​ನಲ್ಲಿ ಅತಿಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ 2 ನೇ ಸ್ಥಾನ ಸಂಪಾದಿಸಲಿದ್ದಾರೆ. ವಿರಾಟ್​ಗೂ ಮೊದಲು ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಶತಕಗಳ ಶತಕ ಶಿಖರವಿದೆ.

andolanait

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

47 mins ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

60 mins ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

1 hour ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

1 hour ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

1 hour ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

1 hour ago