ಕ್ರೀಡೆ

ವಿರಾಟ್‌ ಕೊಹ್ಲಿ ನ್ಯೂ ಹೇರ್​ಸ್ಟ್ರೈಲ್ ಗೆ ಅಭಿಮಾನಿಗಳು ಫಿದಾ

ಏಷ್ಯಾ ಕಪ್​ನಲ್ಲಿ ಭರ್ಜರಿ ಶತಕದ ಮೂಲಕ ಫಾರ್ಮ್​ಗೆ ಮರಳಿರುವ ವಿರಾಟ್​ ವಿಶ್ವಕಪ್​ ಸಿದ್ಧತೆಯಲ್ಲಿದ್ದಾರೆ. ಈ ನಡುವೆ ಅವರು ಹೊಸ ಹೇರ್​ಸ್ಟ್ರೈಲ್​  ಮಾಡಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇವರು ಈ ನ್ಯೂ ಲುಕ್‌ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಆಸ್ಟ್ರೇಲಿಯಾ ಸರಣಿಯ ಮೊದಲ ಟಿ20 ಪಂದ್ಯ ಪಂಜಾಬ್​ನ ಮೊಹಾಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊಹಾಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ವಿರಾಟ್​ ಕೊಹ್ಲಿ ತಮ್ಮದೇ ಫ್ಯಾಷನ್​ನಿಂದಾಗಿ ಗಮನ ಸೆಳೆದಿದ್ದಾರೆ. ರನ್​ ಮಷಿನ್​ ಹೊಸ ಹೇರ್​ಸ್ಟೈಲ್​ನಲ್ಲಿ ಮಿಂಚಿದ್ದಾರೆ. ವಿಶ್ವಕಪ್​ಗೂ ಮೊದಲು ವಿರಾಟ್​ರ ಹೊಸ ಹೇರ್​ಸ್ಟ್ರೈಲ್​ ಅಭಿಮಾನಿಗಳ ಗಮನ ಸೆಳೆದಿದೆ.ವಿರಾಟ್​ ಕೊಹ್ಲಿ ಮೊಹಾಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಡಿಯೋವನ್ನು ಪಂಜಾಬ್​ ಕ್ರಿಕೆಟ್​ ಸಂಸ್ಥೆ(ಪಿಸಿಎ) ತನ್ನ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ಹೊಸ ಕೂದಲ ವಿನ್ಯಾಸದಲ್ಲಿ ವಿರಾಟ್​ ಮಿಂಚುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗುತ್ತಿವೆ.

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆದ ರಶೀದ್ ಸಲ್ಮಾನಿ ಕೊಹ್ಲಿಯ ಕೂದಲಿಗೆ ಹೊಸ ಲುಕ್ ತಂದಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ರಶೀದ್​ ತಮ್ಮ ಇನ್‌ಸ್ಟಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ತರಹೇವಾರಿಯಾಗಿ ಕಮೆಂಟ್​ ಮಾಡಿದ್ದು, ಮೆಚ್ಚಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್​ನಲ್ಲಿ ರನ್ ಮಷಿನ್ ವಿರಾಟ್​ ಕೊಹ್ಲಿ 3 ವರ್ಷಗಳ ಬಳಿಕ ಅಂದರೆ 1020 ದಿನಗಳ ನಂತರ ಶತಕ ಬಾರಿಸಿ ಕಾಂಗರೂ ನಾಡಿನಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ ತಾವು ರೆಡಿ ಎಂಬ ಸಂದೇಶ ರವಾನೆ ಮಾಡಿದ್ದಾರೆ.
71 ನೇ ಶತಕವನ್ನು ದಾಖಲಿಸುವ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ರಿಕ್ಕಿ ಪಾಂಟಿಂಗ್​ ಅವರ 71 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದರು. ವಿಶ್ವಕಪ್​ನಲ್ಲಿ ಇನ್ನೊಂದು ಶತಕ ಬಾರಿಸಿದರೂ ವಿಶ್ವ ಕ್ರಿಕೆಟ್​ನಲ್ಲಿ ಅತಿಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ 2 ನೇ ಸ್ಥಾನ ಸಂಪಾದಿಸಲಿದ್ದಾರೆ. ವಿರಾಟ್​ಗೂ ಮೊದಲು ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಶತಕಗಳ ಶತಕ ಶಿಖರವಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago