ಏಷ್ಯಾ ಕಪ್ನಲ್ಲಿ ಭರ್ಜರಿ ಶತಕದ ಮೂಲಕ ಫಾರ್ಮ್ಗೆ ಮರಳಿರುವ ವಿರಾಟ್ ವಿಶ್ವಕಪ್ ಸಿದ್ಧತೆಯಲ್ಲಿದ್ದಾರೆ. ಈ ನಡುವೆ ಅವರು ಹೊಸ ಹೇರ್ಸ್ಟ್ರೈಲ್ ಮಾಡಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇವರು ಈ ನ್ಯೂ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಆಸ್ಟ್ರೇಲಿಯಾ ಸರಣಿಯ ಮೊದಲ ಟಿ20 ಪಂದ್ಯ ಪಂಜಾಬ್ನ ಮೊಹಾಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊಹಾಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ವಿರಾಟ್ ಕೊಹ್ಲಿ ತಮ್ಮದೇ ಫ್ಯಾಷನ್ನಿಂದಾಗಿ ಗಮನ ಸೆಳೆದಿದ್ದಾರೆ. ರನ್ ಮಷಿನ್ ಹೊಸ ಹೇರ್ಸ್ಟೈಲ್ನಲ್ಲಿ ಮಿಂಚಿದ್ದಾರೆ. ವಿಶ್ವಕಪ್ಗೂ ಮೊದಲು ವಿರಾಟ್ರ ಹೊಸ ಹೇರ್ಸ್ಟ್ರೈಲ್ ಅಭಿಮಾನಿಗಳ ಗಮನ ಸೆಳೆದಿದೆ.ವಿರಾಟ್ ಕೊಹ್ಲಿ ಮೊಹಾಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಡಿಯೋವನ್ನು ಪಂಜಾಬ್ ಕ್ರಿಕೆಟ್ ಸಂಸ್ಥೆ(ಪಿಸಿಎ) ತನ್ನ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದೆ. ಹೊಸ ಕೂದಲ ವಿನ್ಯಾಸದಲ್ಲಿ ವಿರಾಟ್ ಮಿಂಚುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿವೆ.
ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆದ ರಶೀದ್ ಸಲ್ಮಾನಿ ಕೊಹ್ಲಿಯ ಕೂದಲಿಗೆ ಹೊಸ ಲುಕ್ ತಂದಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ರಶೀದ್ ತಮ್ಮ ಇನ್ಸ್ಟಾಮ್ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ತರಹೇವಾರಿಯಾಗಿ ಕಮೆಂಟ್ ಮಾಡಿದ್ದು, ಮೆಚ್ಚಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್ನಲ್ಲಿ ರನ್ ಮಷಿನ್ ವಿರಾಟ್ ಕೊಹ್ಲಿ 3 ವರ್ಷಗಳ ಬಳಿಕ ಅಂದರೆ 1020 ದಿನಗಳ ನಂತರ ಶತಕ ಬಾರಿಸಿ ಕಾಂಗರೂ ನಾಡಿನಲ್ಲಿ ನಡೆಯುವ ಟಿ20 ವಿಶ್ವಕಪ್ಗೆ ತಾವು ರೆಡಿ ಎಂಬ ಸಂದೇಶ ರವಾನೆ ಮಾಡಿದ್ದಾರೆ.
71 ನೇ ಶತಕವನ್ನು ದಾಖಲಿಸುವ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ರಿಕ್ಕಿ ಪಾಂಟಿಂಗ್ ಅವರ 71 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದರು. ವಿಶ್ವಕಪ್ನಲ್ಲಿ ಇನ್ನೊಂದು ಶತಕ ಬಾರಿಸಿದರೂ ವಿಶ್ವ ಕ್ರಿಕೆಟ್ನಲ್ಲಿ ಅತಿಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ 2 ನೇ ಸ್ಥಾನ ಸಂಪಾದಿಸಲಿದ್ದಾರೆ. ವಿರಾಟ್ಗೂ ಮೊದಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಶತಕಗಳ ಶತಕ ಶಿಖರವಿದೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…