ಕ್ರೀಡೆ

ವಿರಾಟ್‌ ಕೊಹ್ಲಿ ನ್ಯೂ ಹೇರ್​ಸ್ಟ್ರೈಲ್ ಗೆ ಅಭಿಮಾನಿಗಳು ಫಿದಾ

ಏಷ್ಯಾ ಕಪ್​ನಲ್ಲಿ ಭರ್ಜರಿ ಶತಕದ ಮೂಲಕ ಫಾರ್ಮ್​ಗೆ ಮರಳಿರುವ ವಿರಾಟ್​ ವಿಶ್ವಕಪ್​ ಸಿದ್ಧತೆಯಲ್ಲಿದ್ದಾರೆ. ಈ ನಡುವೆ ಅವರು ಹೊಸ ಹೇರ್​ಸ್ಟ್ರೈಲ್​  ಮಾಡಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇವರು ಈ ನ್ಯೂ ಲುಕ್‌ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಆಸ್ಟ್ರೇಲಿಯಾ ಸರಣಿಯ ಮೊದಲ ಟಿ20 ಪಂದ್ಯ ಪಂಜಾಬ್​ನ ಮೊಹಾಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊಹಾಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ವಿರಾಟ್​ ಕೊಹ್ಲಿ ತಮ್ಮದೇ ಫ್ಯಾಷನ್​ನಿಂದಾಗಿ ಗಮನ ಸೆಳೆದಿದ್ದಾರೆ. ರನ್​ ಮಷಿನ್​ ಹೊಸ ಹೇರ್​ಸ್ಟೈಲ್​ನಲ್ಲಿ ಮಿಂಚಿದ್ದಾರೆ. ವಿಶ್ವಕಪ್​ಗೂ ಮೊದಲು ವಿರಾಟ್​ರ ಹೊಸ ಹೇರ್​ಸ್ಟ್ರೈಲ್​ ಅಭಿಮಾನಿಗಳ ಗಮನ ಸೆಳೆದಿದೆ.ವಿರಾಟ್​ ಕೊಹ್ಲಿ ಮೊಹಾಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಡಿಯೋವನ್ನು ಪಂಜಾಬ್​ ಕ್ರಿಕೆಟ್​ ಸಂಸ್ಥೆ(ಪಿಸಿಎ) ತನ್ನ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ಹೊಸ ಕೂದಲ ವಿನ್ಯಾಸದಲ್ಲಿ ವಿರಾಟ್​ ಮಿಂಚುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗುತ್ತಿವೆ.

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆದ ರಶೀದ್ ಸಲ್ಮಾನಿ ಕೊಹ್ಲಿಯ ಕೂದಲಿಗೆ ಹೊಸ ಲುಕ್ ತಂದಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ರಶೀದ್​ ತಮ್ಮ ಇನ್‌ಸ್ಟಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ತರಹೇವಾರಿಯಾಗಿ ಕಮೆಂಟ್​ ಮಾಡಿದ್ದು, ಮೆಚ್ಚಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್​ನಲ್ಲಿ ರನ್ ಮಷಿನ್ ವಿರಾಟ್​ ಕೊಹ್ಲಿ 3 ವರ್ಷಗಳ ಬಳಿಕ ಅಂದರೆ 1020 ದಿನಗಳ ನಂತರ ಶತಕ ಬಾರಿಸಿ ಕಾಂಗರೂ ನಾಡಿನಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ ತಾವು ರೆಡಿ ಎಂಬ ಸಂದೇಶ ರವಾನೆ ಮಾಡಿದ್ದಾರೆ.
71 ನೇ ಶತಕವನ್ನು ದಾಖಲಿಸುವ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ರಿಕ್ಕಿ ಪಾಂಟಿಂಗ್​ ಅವರ 71 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದರು. ವಿಶ್ವಕಪ್​ನಲ್ಲಿ ಇನ್ನೊಂದು ಶತಕ ಬಾರಿಸಿದರೂ ವಿಶ್ವ ಕ್ರಿಕೆಟ್​ನಲ್ಲಿ ಅತಿಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ 2 ನೇ ಸ್ಥಾನ ಸಂಪಾದಿಸಲಿದ್ದಾರೆ. ವಿರಾಟ್​ಗೂ ಮೊದಲು ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಶತಕಗಳ ಶತಕ ಶಿಖರವಿದೆ.

andolanait

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

7 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

8 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

8 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

8 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

8 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

8 hours ago