virat kohli
ಬೆಂಗಳೂರು : ಟ್ವೆಂಟಿ-20 ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಆರ್.ಸಿ.ಬಿ ವಿಜಯೋತ್ಸವ ಆಚರಣೆ ವೇಳೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಅಭಿಮಾನಿಗಳ ಸಾವು-ನೋವಿಗೆ ಟೀಂ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ತೀವ್ರ ಕಂಬನಿ ಮಿಡಿದಿದ್ದಾರೆ.
ತಮ್ಮ ನೋವಿನ ಜೊತೆಗೆ ಕೊಹ್ಲಿ, ಆರ್.ಸಿ.ಬಿ ನೋವಿನ ಸಂದೇಶವನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸಂಭವಿಸಿದ ದುರಂತದ ಬಗ್ಗೆ ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತದಿಂದ ಉಂಟಾದ ಸಾವು-ನೋವಿನಿಂದ ತೀವ್ರ ದುಃಖಿತನಾಗಿದ್ದೇನೆ. ಬಾಯಿಂದ ಮಾತುಗಳೇ ಹೊರಡುತ್ತಿಲ್ಲ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ, ಬೆಂಗಳೂರಿನಾದ್ಯಂತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಅಲ್ಲಿ ನಡೆದ ಅನಾಹುತದ ನಡೆದಿದೆ.
ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ. ಪ್ರಾಣ ಕಳೆದುಕೊಂಡವರಿಗೆ ಆರ್.ಸಿ.ಬಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಪೀಡಿತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ಮುಗಿಸಿದ್ದೇವೆ ಮತ್ತು ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ದಯವಿಟ್ಟು ಸುರಕ್ಷಿತವಾಗಿರುವಂತೆ ನಮ್ಮ ಅಭಿಮಾನಿಗಳಿಗೆ ನಾವು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು ಆರ್.ಸಿ.ಬಿ ಕೂಡ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಜೀವಹಾನಿಗೆ ಆರ್.ಸಿ.ಬಿ ತಂಡ ಶೋಕ ವ್ಯಕ್ತಪಡಿಸುತ್ತದೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪಗಳು. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ತಿದ್ದುಪಡಿ ಮಾಡಿದ್ದೇವೆ. ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ಆರ್.ಸಿ.ಬಿ ಅಭಿಮಾನಿಗಳು ದಯವಿಟ್ಟು ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಂಡಿದೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…