ಕ್ರೀಡೆ

ದಕ್ಷಿಣ ಆಫ್ರಿಕಾ ಪ್ರವಾಸದಿಂದ ತವರಿಗೆ ಮರಳಿದ ವಿರಾಟ್ ಕೊಹ್ಲಿ: ವರದಿ

ಮುಂಬೈ: ಡಿಸೆಂಬರ್‌ ೨೬ ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಪ್ರಾರಂಭಗೊಳ್ಳಲಿದ್ದು, ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ, ಟೀಂ ಇಂಡಿಯಾ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಕೌಟುಂಬಿಕ ತುರ್ತು ಕಾರಣಗಳಿಗಾಗಿ ಭಾರತದ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ದಕ್ಷಿಣ ಆಫ್ರಿಕಾದಿಂದ ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಟೀಂ ಇಂಡಿಯಾ ಆಡಳಿತ ಮಂಡಳಿಯ ಅನುಮತಿ ಪಡೆದು ಮೂರು ದಿನಗಳ ಹಿಂದೆ ಮುಂಬೈಗೆ ಮರಳಿದ್ದರು. ಪ್ರಿಟೋರಿಯಾದಲ್ಲಿ ಗುರುವಾರ ನಡೆದ ಮೂರನೆ ಹಾಗೂ ಅಂತಿಮ ಪಂದ್ಯದ ತಂಡದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿಲ್ಲ. ಯಾವ ಕೌಟುಂಬಿಕ ತುರ್ತು ಕಾರಣಕ್ಕಾಗಿ ವಿರಾಟ್ ಮರಳಿದ್ದಾರೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದಿದ್ದರೂ, ಅವರು ಡಿಸೆಂಬರ್ 22ರಂದು ಮತ್ತೆ ದಕ್ಷಿಣ ಆಫ್ರಿಕಾಗೆ ಮರಳಲಿದ್ದಾರೆ ಎಂದು Crickbuzz ವರದಿ ಮಾಡಿದೆ.

ನಾಯಕ ರೋಹಿತ್‌ ಶರ್ಮಾ ಮತ್ತು ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರಿಗೆ ಟಿ-20 ಸರಣಿ ಹಾಗೂ ಏಕದಿನ ಪಂದ್ಯಗಳ ಸರಣಿಗಳಿಂದ ಬಿಸಿಸಿಐ ವಿಶ್ರಾಂತಿ ನೀಡಿತ್ತು.

 

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago