ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ವಿಶಿಷ್ಟ ಸಾಧನೆ ಬರೆದ ವಿರಾಟ್‌ ಕೊಹ್ಲಿ!

ಬೆಂಗಳೂರು: ಟೀಂ ಇಂಡಿಯಾದ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರು ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ವಿಶೇಷ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅವರು 100ನೇ ಸಲ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ (ಮಾ.೨೫) ನಡದ ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ಕೊಹ್ಲಿ ಈವರೆಗೆ 378 ಟಿ20 ಪಂದ್ಯಗಳನ್ನಾಡಿದ್ದು, ಅದರಲ್ಲಿ 92 ಅರ್ಧಶತಕ ಹಾಗೂ ಎಂಟು ಶತಕಗಳನ್ನು ಗಳಿಸಿದ್ದಾರೆ. ಆ ಮೂಲಕ ಭಾರತೀಯ ಬ್ಯಾಟರ್‌ ಒಬ್ಬರು ಟಿ20 ಕ್ರಿಕೆಟ್‌ನಲ್ಲಿ 100ನೇ ಸಲ 50 ರನ್‌ ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮತ್ತು ಒಟ್ಟಾರೆಯಾಗಿ ಟಿ20 ಕ್ರಿಕೆಟ್‌ನಲ್ಲಿ 100ನೇ ಬಾರಿ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50 ಪ್ಲಸ್ ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ, ವೆಸ್ಟ್‌ಇಂಡೀಸ್‌ನ ದಿಗ್ಗಜ ಕ್ರಿಸ್ ಗೇಲ್ (22 ಶತಕ ಸೇರಿದಂತೆ 110 ಸಲ 50 ಪ್ಲಸ್ ರನ್) ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ (8 ಶತಕ ಸೇರಿದಂತೆ 109 ಸಲ 50 ಪ್ಲಸ್ ರನ್). ನಂತರದ ಸ್ಥಾನದಲ್ಲಿ ಕಿಂಗ್‌ ಕೊಹ್ಲಿ ಕಾಣಿಸಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

56 mins ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

1 hour ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

1 hour ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

2 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

2 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

2 hours ago