ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ವಿಶಿಷ್ಟ ಸಾಧನೆ ಬರೆದ ವಿರಾಟ್‌ ಕೊಹ್ಲಿ!

ಬೆಂಗಳೂರು: ಟೀಂ ಇಂಡಿಯಾದ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರು ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ವಿಶೇಷ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅವರು 100ನೇ ಸಲ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ (ಮಾ.೨೫) ನಡದ ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ಕೊಹ್ಲಿ ಈವರೆಗೆ 378 ಟಿ20 ಪಂದ್ಯಗಳನ್ನಾಡಿದ್ದು, ಅದರಲ್ಲಿ 92 ಅರ್ಧಶತಕ ಹಾಗೂ ಎಂಟು ಶತಕಗಳನ್ನು ಗಳಿಸಿದ್ದಾರೆ. ಆ ಮೂಲಕ ಭಾರತೀಯ ಬ್ಯಾಟರ್‌ ಒಬ್ಬರು ಟಿ20 ಕ್ರಿಕೆಟ್‌ನಲ್ಲಿ 100ನೇ ಸಲ 50 ರನ್‌ ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮತ್ತು ಒಟ್ಟಾರೆಯಾಗಿ ಟಿ20 ಕ್ರಿಕೆಟ್‌ನಲ್ಲಿ 100ನೇ ಬಾರಿ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50 ಪ್ಲಸ್ ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ, ವೆಸ್ಟ್‌ಇಂಡೀಸ್‌ನ ದಿಗ್ಗಜ ಕ್ರಿಸ್ ಗೇಲ್ (22 ಶತಕ ಸೇರಿದಂತೆ 110 ಸಲ 50 ಪ್ಲಸ್ ರನ್) ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ (8 ಶತಕ ಸೇರಿದಂತೆ 109 ಸಲ 50 ಪ್ಲಸ್ ರನ್). ನಂತರದ ಸ್ಥಾನದಲ್ಲಿ ಕಿಂಗ್‌ ಕೊಹ್ಲಿ ಕಾಣಿಸಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

27 mins ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

1 hour ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

2 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

2 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

4 hours ago

ಚೆಕ್‌ ಬೌನ್ಸ್‌ ಕೇಸ್ : ಶಾಲಾ ಕಾರ್ಯದರ್ಶಿಗೆ ಕೊಲೆ ಬೆದರಿಕೆ :‌ ಶಾಲೆ ಕಿಟಕಿ ಗಾಜು ಹೊಡೆದು ಪುಂಡಾಟ : ಇಬ್ಬರ ವಿರುದ್ಧ ದೂರು

ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್‌ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…

4 hours ago