ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ವಿಶಿಷ್ಟ ಸಾಧನೆ ಬರೆದ ವಿರಾಟ್‌ ಕೊಹ್ಲಿ!

ಬೆಂಗಳೂರು: ಟೀಂ ಇಂಡಿಯಾದ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ ಅವರು ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ವಿಶೇಷ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅವರು 100ನೇ ಸಲ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ (ಮಾ.೨೫) ನಡದ ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ಕೊಹ್ಲಿ ಈವರೆಗೆ 378 ಟಿ20 ಪಂದ್ಯಗಳನ್ನಾಡಿದ್ದು, ಅದರಲ್ಲಿ 92 ಅರ್ಧಶತಕ ಹಾಗೂ ಎಂಟು ಶತಕಗಳನ್ನು ಗಳಿಸಿದ್ದಾರೆ. ಆ ಮೂಲಕ ಭಾರತೀಯ ಬ್ಯಾಟರ್‌ ಒಬ್ಬರು ಟಿ20 ಕ್ರಿಕೆಟ್‌ನಲ್ಲಿ 100ನೇ ಸಲ 50 ರನ್‌ ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮತ್ತು ಒಟ್ಟಾರೆಯಾಗಿ ಟಿ20 ಕ್ರಿಕೆಟ್‌ನಲ್ಲಿ 100ನೇ ಬಾರಿ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50 ಪ್ಲಸ್ ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ, ವೆಸ್ಟ್‌ಇಂಡೀಸ್‌ನ ದಿಗ್ಗಜ ಕ್ರಿಸ್ ಗೇಲ್ (22 ಶತಕ ಸೇರಿದಂತೆ 110 ಸಲ 50 ಪ್ಲಸ್ ರನ್) ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಎರಡನೇ ಸ್ಥಾನದಲ್ಲಿದ್ದಾರೆ (8 ಶತಕ ಸೇರಿದಂತೆ 109 ಸಲ 50 ಪ್ಲಸ್ ರನ್). ನಂತರದ ಸ್ಥಾನದಲ್ಲಿ ಕಿಂಗ್‌ ಕೊಹ್ಲಿ ಕಾಣಿಸಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago