ನವದೆಹಲಿ: ಟಿ20 ವಿಶ್ವಕಪ್ನಲ್ಲಿ ಈ ಆಟಗಾರನನ್ನು ಟೀಂ ಇಂಡಿಯಾ ತಂಡದಲ್ಲಿ ರೋಹಿತ್ ಶರ್ಮಾಗೆ ಜೊತೆಯಾಗಿ ಬ್ಯಾಟಿಂಗ್ ಮಾಡಲು ಕಳುಹಿಸಬೇಕು ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ಪ್ರಸಕ್ತ ಐಪಿಎಲ್ನಲ್ಲಿ ಭರ್ಜರಿ ಫಾರ್ಮ್ನೊಂದಿಗೆ ಬ್ಯಾಟ್ ಬೀಸುತ್ತಿರುವ ವಿರಾಟ್ ಕೊಹ್ಲಿ ಕುರಿತು ದಾದಾ ಈ ಹೇಳಿಕೆ ನೀಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ಯಾವುದು ಸರಿಯಿಲ್ಲ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಜಗಜ್ಜಾಹಿರಾಗಿರುವ ವಿಷಯವಾಗಿದೆ. ಆಗಿದ್ದರೂ ದಾದಾ ವಿರಾಟ್ ಪರ ಬ್ಯಾಟ್ ಬೀಸಿರುವುದು ಅಚ್ಚರಿಗೆ ಕಾರಣವಾಗಿದೆ.
ಖಾಸಗಿ ಕಾರ್ಯಕ್ರಮವೊಂದಲ್ಲಿ ಮಾತನಾಡಿರುವ ಗಂಗೂಲಿ, ವಿರಾಟ್ ಬ್ಯಾಟಿಂಗ್ ನಲ್ಲಿ ಅತ್ಯುತ್ತಮವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಐಪಿಎಲ್ನಲ್ಲಿ ಕೆಲವು ಇನ್ನಿಂಗ್ಸ್ಗಳು ಅದ್ಭುತವಾಗಿ ಮೂಡಿ ಬಂದಿದೆ. ಅವರ ಈ ಫಾರ್ಮ್ ಹೀಗೆ ಮುಂದುವರೆಯಲಿದ್ದು, ಟಿ20 ವಿಶ್ವಕಪ್ನಲ್ಲಿ ಅವರನ್ನು ಆರಂಭಿಕರನ್ನಾಗಿ ಕಣಕ್ಕಿಳಿಸುವುದು ಉತ್ತಮ ಎಂದು ಹೇಳಿದ್ದಾರೆ.
ಜೊತೆಗೆ ವಿಶ್ವಕಪ್ ತಂಡ ಆಯ್ಕೆ ಬಗ್ಗೆಯೂ ಮೆಚ್ಚುಗೆ ಮಾತುಗಳನ್ನಾಡಿರುವ ಅವರು, ಬ್ಯಾಟಂಗ್, ಬೌಲಿಂಗ್ ಸೇರಿದಂತೆ ಗಟ್ಟಿಯಾದ ಉತ್ತಮ ತಂಡವನ್ನೇ ಕಟ್ಟಲಾಗಿದೆ. ಈ ತಂಡದ ಸಹಾಯದಿಂದ 17 ವರ್ಷಗಳ ಟ್ರೋಫಿ ಬರ ನೀಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಐಪಿಎಲ್ನಲ್ಲಿ ಈವರೆಗೆ ವಿರಾಟ್ 12 ಪಂದ್ಯಗಳನ್ನಾಡಿದ್ದು, 70.44ರ ಸರಾಸರಿಯಲ್ಲಿ 634 ರನ್ ಬಾರಿಸಿ ಟೂರ್ನಿಯಲ್ಲಿ ಲೀಡಿಂಗ್ ರನ್ ಸ್ಕೋರರ್ ಆಗಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…